ನೇಪಾಳದಲ್ಲಿ ಪ್ರತಿಭಟನೆ ನಡೆಸಿದ 40 ಮಂದಿ ಬಂಧನ 
ವಿದೇಶ

ನೇಪಾಳದ ಭಾರತೀಯ ರಾಯಭಾರಿ ಕಚೇರಿ ಎದುರು ಪ್ರತಿಭಟನೆ: 40 ಮಂದಿ ಬಂಧನ

ನೇಪಾಳಕ್ಕೆ ಪೂರೈಕೆಯಾಗಬೇಕಿದ್ದ ಸರಕುಗಳು ಭಾರತ- ನೇಪಾಳ ಗಡಿಯಲ್ಲೇ ಸ್ಥಗಿತಗೊಂಡಿರುವುದರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ನೇಪಾಳಿ ಮಾನವ ಹಕ್ಕುಗಳ 40 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕಠ್ಮಂಡು: ನೇಪಾಳಕ್ಕೆ ಪೂರೈಕೆಯಾಗಬೇಕಿದ್ದ ಸರಕುಗಳು ಭಾರತ- ನೇಪಾಳ ಗಡಿಯಲ್ಲೇ ಸ್ಥಗಿತಗೊಂಡಿರುವುದರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ  ನೇಪಾಳಿ ಮಾನವ ಹಕ್ಕುಗಳ 40 ಕಾರ್ಯಕರ್ತರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.
ನೇಪಾಳದಲ್ಲಿರುವ ಭಾರತದ ರಾಯಭಾರಿ ಕಚೇರಿಯ ಎದುರು ಜಮಾಯಿಸಿದ ಮಾನವಹಕ್ಕುಗಳ ಕಾರ್ಯಕರ್ತರು, ಭಾರತದಿಂದ ನೇಪಾಳಕ್ಕೆ ಪೂರೈಕೆಯಾಗಬೇಕಿದ್ದ ಅಗತ್ಯ ಸರಕುಗಳನ್ನು ಗಡಿ ಭಾಗದಲ್ಲೇ ತಡೆಹಿಡಿಯಲಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದರು. ಭಾರತ ಸರ್ಕಾರ ವಾಣಿಜ್ಯ ಪ್ರತಿಬಂಧಕ ಕ್ರಮವನ್ನು ಅನುಸರಿಸುತ್ತಿರುವುದು ಸರಿಯಲ್ಲ. ಭಾರತ ಸರ್ಕಾರದ ಕ್ರಮ ಮಾನವ ಹಕ್ಕುಗಳ ಉಲ್ಲಂಘನೆ. ಮೋದಿ ಜಿ ಸರಕುಗಳ ತಡೆಯನ್ನು ಹಿಂಪಡೆಯಿರಿ, ನೇಪಾಳದ ಸಾರ್ವಭೌಮತ್ವವನ್ನು ಗೌರವಿಸಿ ಎಂದು ಘೋಷಣೆ ಕೂಗಿದರು.
ಭಾರತದ ರಾಯಭಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದ ಕಾರ್ಯಕರ್ತ ಕೃಷ್ಣಾ ಪಹಾಡಿ ಸೇರಿದಂತೆ 40 ಜನರನ್ನು ಬಂಧಿಸಲಾಗಿದೆ. ನೇಪಾಳದಲ್ಲಿ ಜಾರಿಯಾಗಿರುವ ನೂತನ ಸಂವಿಧಾನದಲ್ಲಿ ಮಾದೇಶಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ನೇಪಾಳ- ಭಾರತ ಗಡಿ ಭಾಗದಲ್ಲಿರುವ ಮಾದೇಶಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೇಪಾಳಕ್ಕೆ ಪೂರೈಕೆಯಾಗಬೇಕಿದ್ದ ಸರಕುಗಳು ಗಡಿ ಭಾಗದಲ್ಲೇ ಸ್ಥಗಿತಗೊಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT