ನೇಪಾಳದಲ್ಲಿ ಪ್ರತಿಭಟನೆ ನಡೆಸಿದ 40 ಮಂದಿ ಬಂಧನ 
ವಿದೇಶ

ನೇಪಾಳದ ಭಾರತೀಯ ರಾಯಭಾರಿ ಕಚೇರಿ ಎದುರು ಪ್ರತಿಭಟನೆ: 40 ಮಂದಿ ಬಂಧನ

ನೇಪಾಳಕ್ಕೆ ಪೂರೈಕೆಯಾಗಬೇಕಿದ್ದ ಸರಕುಗಳು ಭಾರತ- ನೇಪಾಳ ಗಡಿಯಲ್ಲೇ ಸ್ಥಗಿತಗೊಂಡಿರುವುದರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ನೇಪಾಳಿ ಮಾನವ ಹಕ್ಕುಗಳ 40 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕಠ್ಮಂಡು: ನೇಪಾಳಕ್ಕೆ ಪೂರೈಕೆಯಾಗಬೇಕಿದ್ದ ಸರಕುಗಳು ಭಾರತ- ನೇಪಾಳ ಗಡಿಯಲ್ಲೇ ಸ್ಥಗಿತಗೊಂಡಿರುವುದರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ  ನೇಪಾಳಿ ಮಾನವ ಹಕ್ಕುಗಳ 40 ಕಾರ್ಯಕರ್ತರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.
ನೇಪಾಳದಲ್ಲಿರುವ ಭಾರತದ ರಾಯಭಾರಿ ಕಚೇರಿಯ ಎದುರು ಜಮಾಯಿಸಿದ ಮಾನವಹಕ್ಕುಗಳ ಕಾರ್ಯಕರ್ತರು, ಭಾರತದಿಂದ ನೇಪಾಳಕ್ಕೆ ಪೂರೈಕೆಯಾಗಬೇಕಿದ್ದ ಅಗತ್ಯ ಸರಕುಗಳನ್ನು ಗಡಿ ಭಾಗದಲ್ಲೇ ತಡೆಹಿಡಿಯಲಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದರು. ಭಾರತ ಸರ್ಕಾರ ವಾಣಿಜ್ಯ ಪ್ರತಿಬಂಧಕ ಕ್ರಮವನ್ನು ಅನುಸರಿಸುತ್ತಿರುವುದು ಸರಿಯಲ್ಲ. ಭಾರತ ಸರ್ಕಾರದ ಕ್ರಮ ಮಾನವ ಹಕ್ಕುಗಳ ಉಲ್ಲಂಘನೆ. ಮೋದಿ ಜಿ ಸರಕುಗಳ ತಡೆಯನ್ನು ಹಿಂಪಡೆಯಿರಿ, ನೇಪಾಳದ ಸಾರ್ವಭೌಮತ್ವವನ್ನು ಗೌರವಿಸಿ ಎಂದು ಘೋಷಣೆ ಕೂಗಿದರು.
ಭಾರತದ ರಾಯಭಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದ ಕಾರ್ಯಕರ್ತ ಕೃಷ್ಣಾ ಪಹಾಡಿ ಸೇರಿದಂತೆ 40 ಜನರನ್ನು ಬಂಧಿಸಲಾಗಿದೆ. ನೇಪಾಳದಲ್ಲಿ ಜಾರಿಯಾಗಿರುವ ನೂತನ ಸಂವಿಧಾನದಲ್ಲಿ ಮಾದೇಶಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ನೇಪಾಳ- ಭಾರತ ಗಡಿ ಭಾಗದಲ್ಲಿರುವ ಮಾದೇಶಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೇಪಾಳಕ್ಕೆ ಪೂರೈಕೆಯಾಗಬೇಕಿದ್ದ ಸರಕುಗಳು ಗಡಿ ಭಾಗದಲ್ಲೇ ಸ್ಥಗಿತಗೊಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT