ಅಜ್ಮಲ್ ಕಸಬ್ 
ವಿದೇಶ

26/11 ಮುಂಬೈ ದಾಳಿ ಪ್ರಕರಣದ ರೂವಾರಿ ಅಜ್ಮಲ್ ಕಸಬ್ ಬದುಕಿದ್ದಾನಂತೆ!

26/11 ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಗಲ್ಲು ಶಿಕ್ಷೆ ಪಡೆದ ಅಜ್ಮಲ್ ಕಸಬ್ ಬದುಕಿದ್ದಾನಂತೆ! ಹೀಗೆಂದು ಕಸಬ್​ಗೆ ಪಾಠ ಹೇಳಿದ ಮೇಷ್ಟ್ರು ಪಾಕಿಸ್ತಾನದ ...

ಲಾಹೋರ್: 26/11 ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಗಲ್ಲು ಶಿಕ್ಷೆ ಪಡೆದ ಅಜ್ಮಲ್ ಕಸಬ್ ಬದುಕಿದ್ದಾನಂತೆ! ಹೀಗೆಂದು ಕಸಬ್​ಗೆ ಪಾಠ ಹೇಳಿದ ಮೇಷ್ಟ್ರು ಪಾಕಿಸ್ತಾನದ ಕೋರ್ಟ್​ನಲ್ಲಿ ಹೇಳಿಕೆ ನೀಡಿದ್ದಾರೆ.

ಅಜ್ಮಲ್ ಕಸಬ್ ಪ್ರಾಥಮಿಕ ಶಿಕ್ಷಣ ಮಾಡಿದ್ದ ಎನ್ನಲಾದ ಫರೀದ್​ಕೋಟ್​ನ ಶಾಲೆಯಲ್ಲಿ ಶಿಕ್ಷಕರಾದ ಮುದಾಸ್ಸಿರ್ ಲಖ್ವಿ, ತಾನು ಕಸಬ್​ಗೆ ಪಾಠ ಹೇಳಿರುವುದಾಗಿ, ಆತ ಈಗಲೂ ಜೀವಂತವಿರುವುದಾಗಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆಗೆ ಕಸಬ್​ನನ್ನು ಕೋರ್ಟ್ ವಶಕ್ಕೆ ಒಪ್ಪಿಸುವುದಾಗಿಯೂ ಹೇಳಿಕೊಂಡಿದ್ದಾರಂತೆ.

ಹೆಡ್ ಮಾಸ್ಟರ್ ಈ ಹೇಳಿಕೆ ತನಿಖಾ ಅಧಿಕಾರಿಗಳಿಗೆ ಭಾರೀ ಕಿರಿಕಿರಿ ಉಂಟು ಮಾಡಿದೆ.ಇನ್ನು ಕಸಬ್ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದ ಎಂಬುದರ ಬಗ್ಗೆ ಸರಿಯಾದ ದಾಖಲೆಗಳನ್ನು ಒದಗಿಸಿದರೇ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇಸ್ಲಮಾಬಾದ್​ನ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಭಯೋತ್ಪಾದನಾ ನಿಗ್ರಹ ಕೋರ್ಟ್​ನಲ್ಲಿ ಮುಂಬೈ ದಾಳಿ ತನಿಖೆ ಸಂದರ್ಭ ಅಚ್ಚರಿಯ ಬೆಳವಣಿಗೆ ನಡೆದಿದೆ. ಈತ ಮುಂಬೈ ದಾಳಿ ಸಂಬಂಧ ನಡೆಯುತ್ತಿರುವ ವಿಚಾರಣೆಯ ಪ್ರಮುಖ ಸಾಕ್ಷಿಯಾಗಿದ್ದಾರೆ.

ಇತ್ತ ಅದೇ ದಿನ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮ ಸ್ವರಾಜ್ ಇಸ್ಲಾಮಾಬಾದ್​ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಾಕ್​ನ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ಮುಂಬೈ ದಾಳಿ ಪ್ರಕರಣದ ವಿಚಾರಣೆ ಬೇಗ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT