ನೇಪಾಳ ರಾಷ್ಟ್ರಾಧ್ಯಕ್ಷರ ವಿರುದ್ಧ ಪ್ರತಿಭಟನೆ 
ವಿದೇಶ

ತೀವ್ರಗೊಂಡ ಮದೇಶಿ ಸಮುದಾಯದ ಪ್ರತಿಭಟನೆ: ನೇಪಾಳ ರಾಷ್ಟ್ರಾಧ್ಯಕ್ಷರ ಕಾರಿನ ಮೇಲೆ ದಾಳಿ

ನೇಪಾಳದಲ್ಲಿ ಜಾರಿಗೆ ಬಂದಿರುವ ಸಂವಿಧಾನದಲ್ಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಮದೇಶಿ ಸಮುದಾಯದವರು ನೇಪಾಳದ ರಾಷ್ಟ್ರಾಧ್ಯಕ್ಷರ ಕಾರಿನ ಮೇಲೆ ದಾಳಿ ನಡೆಸಿದ್ದಾರೆ.

ಕಠ್ಮಂಡು: ನೇಪಾಳದಲ್ಲಿ ಜಾರಿಗೆ ಬಂದಿರುವ ಸಂವಿಧಾನದಲ್ಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಮದೇಶಿ ಸಮುದಾಯದವರು ನೇಪಾಳದ ರಾಷ್ಟ್ರಾಧ್ಯಕ್ಷರ ಬೆಂಗಾವಲು ಪಡೆ ಕಾರಿನ ಮೇಲೆ ದಾಳಿ ನಡೆಸಿದ್ದಾರೆ.
ನೇಪಾಲದ ಜನಕಪುರದಲ್ಲಿರುವ ದೇವಾಲಯಕ್ಕೆ ರಾಷ್ಟ್ರಾಧ್ಯಕ್ಷರಾದ ಬಿದ್ಯಾದೇವಿ ಭಂಡಾರಿ ಭೇಟಿ ನೀಡಿದ್ದರು, ದೇವಾಲಯಕ್ಕೆ ಭೇಟಿ ನೀಡುವುದನ್ನು ವಿರೋಧಿಸಿದ ಮದೇಶಿ ಮೋರ್ಚಾದ ಕಾರ್ಯಕರ್ತರು ರಾಷ್ಟ್ರಾಧ್ಯಕ್ಷರ ಕಾರು ಹಾಗೂ ಬೆಂಗಾವಲು ಪಡೆಯ ಕಾರಿನ ಮೇಲೆ ದಾಳಿ ನಡೆಸಿದ್ದು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರಾಧ್ಯಕ್ಷೆ ಬಿದ್ಯಾದೇವಿ ಭಂಡಾರಿ ನೇಪಾಳ ಆಡಳಿತ ಪಕ್ಷ ಸಿಪಿಎನ್-ಯುಎಂಎಲ್ ನ್ನು ಪ್ರತಿನಿಧಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಾಧ್ಯಕ್ಷರ ಭೇಟಿಯನ್ನು  ಮದೇಶಿ ಸಮುದಾಯದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತರು ಪ್ರಾರಂಭದಲ್ಲಿ ಬಿದ್ಯಾದೇವಿ ಭಂಡಾರಿ ಅವರ ಭೇಟಿಯನ್ನು ವಿರೋಧಿಸಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು, ಪ್ರತಿಭಟನೆ ತೀವ್ರಗೊಂಡು ಬಿದ್ಯಾಭಂಡಾರಿ ಅವರ ಬೆಂಗಾವಲು ಪಡೆ ವಾಹನದ ಮೇಲೆ ದಾಳಿ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಚದುರಿಸಲು ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾ ನಿರತರನ್ನು ಚದುರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT