ಚೀನಾ( ಸಾಂದರ್ಭಿಕ ಚಿತ್ರ) 
ವಿದೇಶ

ಉಗ್ರ ಲಖ್ವಿ ಬಿಡುಗಡೆ ಬಗ್ಗೆ ಭಾರತದೊಂದಿಗೆ ಮಾತನಾಡಲು ಸಿದ್ಧ: ಚೀನಾ

ಲಖ್ವಿ ಬಿಡುಗಡೆ ವಿಷಯಕ್ಕೆ ಸಂಬಂಧಿಸಿದಂತೆ ಭಾರತದೊಂದಿಗೆ ಮಾತನಾಡಲು ಸಿದ್ಧ ಎಂದು ಚೀನಾ ತಿಳಿಸಿದೆ.

ಬೀಜಿಂಗ್: ಉಗ್ರ ಲಖ್ವಿಯನ್ನು ಬಿಡುಗಡೆ ಮಾಡಿರುವ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಲು ವಿಶ್ವಸಂಸ್ಥೆಯಲ್ಲಿ ಭಾರತದ ನಿರ್ಣಯಕ್ಕೆ ತಡೆಯೊಡ್ಡಿದ್ದ  ಚೀನಾ,
 ಭಯೋತ್ಪಾದನೆ ಹಾಗೂ ಲಖ್ವಿ ಬಿಡುಗಡೆ ವಿಷಯಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಸಿದ್ಧ ಎಂದು ತಿಳಿಸಿದೆ.  

ಭಯೋತ್ಪಾದನೆ ನಾಶ ಮಾಡಲು ಜಂಟಿ ಕಾರ್ಯಾಚರಣೆ ನಡೆಸುವ ಬಗ್ಗೆ ಭಾರತದೊಂದಿಗೆ ಮಾತುಕತೆ ನಡೆಸಲು ಸಿದ್ಧ ಎಂದು ಹೇಳಿರುವ ಚೀನಾದ  ವಿದೇಶಾಂಗ ಇಲಾಖೆಯ ಏಷ್ಯನ್ ವ್ಯವಹಾರಗಳ ವಿಭಾಗದ ಉಪನಿರ್ದೇಶಕ  ಹುವಾಂಗ್ ಕ್ಸಿಲಿಯಾನ್, ಚೀನಾ ಹಾಗೂ ಭಾರತ ಎರಡೂ ರಾಷ್ಟ್ರಗಳು ಭಯೋತ್ಪಾದನೆಗೆ ಗುರಿಯಾಗಿರುವ ಬಲಿಪಶುಗಳು ಎಂದು ಹೇಳಿದ್ದಾರೆ.

ಮುಂಬೈ ದಾಳಿಯ ರುವಾರಿ ಝಕಿ ಉರ್ ರೆಹಮಾನ್‌ ಲಖ್ವಿ ಬಿಡುಗಡೆ ವಿರೋಧಿಸಿ ಪಾಕಿಸ್ತಾನದ ವಿರುದ್ಧ  ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದ ಭಾರತದ ಕ್ರಮಕ್ಕೆ ವಿಶ್ವಸಂಸ್ಥೆಯಲ್ಲಿ ಚೀನಾ ತಡೆಯೊಡ್ಡಿತ್ತು. ಇದಾದ ಬಳಿಕ ಮೊದಲ ಬಾರಿಕೆ ಚೀನಾ ಭಯೋತ್ಪಾದನೆ ಬಗ್ಗೆ ಮಾತನಾಡಿದ್ದು, ಭಯೋತ್ಪಾದನೆಯನ್ನು ನಿಗ್ರಹಿಸಲು ಭಾರತದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಆದರೆ ಬಹುಪಕ್ಷೀಯ ಸಂಸ್ಥೆಗೆ ಸಂಬಂಧಿಸಿದ  ನಿರ್ದಿಷ್ಟ ವಿಷಯಗಳ ಬಗ್ಗೆ ಮತ್ತಷ್ಟು ಚರ್ಚೆ ನಡೆಯಬೇಕಿದೆ ಎಂದು ಹೇಳಿದೆ.

ವರ್ಷಾಂತ್ಯದಲ್ಲಿ ಭಯೋತ್ಪಾದನಾ ನಿಗ್ರಹ ವ್ಯವಸ್ಥೆಗೆ ಸಂಬಂಧಿಸಿದ ಸಭೆ ನಡೆಯಲಿದ್ದು, ಈ ಸಭೆ ಭಯೋತ್ಪಾದನಾ ನಿಗ್ರಹ ವಿಷಯದಲ್ಲಿ  ಭಾರತ ಹಾಗೂ ಚೀನಾದ ಪರಸ್ಪರ ಸಹಕಾರವನ್ನು ವೃದ್ಧಿಗೊಳಿಸಲಿದೆ ಎಂದು ಚೀನಾ ವಿಶ್ವಾಸ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT