ಸರ್ಬಿಯಾದ ಪ್ರಧಾನಿ ಅಲೆಕ್ಸಾಂಡರ್ ವ್ಯುಸಿಸ್ ಕಲ್ಲೇಟು ತಿಂದ ಘಟನೆ (ಸಂಗ್ರಹ ಚಿತ್ರ) 
ವಿದೇಶ

ಸರ್ಬಿಯಾ ಪ್ರಧಾನಿಗೆ ಕಲ್ಲೇಟು

ಇಪ್ಪತ್ತು ವರ್ಷಗಳ ಹಿಂದಿನ ಬೋಸ್ನಿಯಾ ಮುಸ್ಲಿಮರ ಮಾರಣಹೋಮದ ಆಕ್ರೋಶಕ್ಕೆ ಸರ್ಬಿಯಾದ ಪ್ರಧಾನಿ ಅಲೆಕ್ಸಾಂಡರ್ ವ್ಯುಸಿಸ್ ಕಲ್ಲೇಟು...

-20 ವರ್ಷಗಳ ಹಿಂದಿನ ಮಾರಣಹೋಮದ ಸ್ಮರಣೆ ಕಾರ್ಯಕ್ರಮದಲ್ಲಿ ಆಕ್ರೋಶ

ಸ್ರೆಬ್ರೆನಿಕಾ: ಇಪ್ಪತ್ತು ವರ್ಷಗಳ ಹಿಂದಿನ ಬೋಸ್ನಿಯಾ ಮುಸ್ಲಿಮರ ಮಾರಣಹೋಮದ ಆಕ್ರೋಶಕ್ಕೆ ಸರ್ಬಿಯಾದ ಪ್ರಧಾನಿ ಅಲೆಕ್ಸಾಂಡರ್ ವ್ಯುಸಿಸ್ ಕಲ್ಲೇಟು ತಿಂದ ಘಟನೆ ಶನಿವಾರ ನಡೆದಿದೆ. ಯುಗೊಸ್ಲಾವಿಯಾದ ವಿಭಜನೆ ವೇಳೆ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಮಹಿಳೆಯರು, ಮಕ್ಕಳು ಎನ್ನದೆ ಎಂಟು ಸಾವಿರಕ್ಕೂ ಹೆಚ್ಚು ಸ್ರೆಬ್ರೇನಿಕಾ ಮುಸ್ಲಿಮರನ್ನು ಬೋಸ್ನಿಯನ್ ಸರ್ಬ್ ಸೈನಿಕರು ಹತ್ಯೆ ಮಾಡಿದ್ದರು. ಆ ವೇಳೆ ಸರ್ಬಿಯಾ ಬೋಸ್ನಿಯನ್ ಸರ್ಬ್‍ಗೆ ಬೆಂಬಲ ವ್ಯಕ್ತಪಡಿಸಿತ್ತು. ಈ ವೇಳೆ ಬೋಸ್ನಿಯನ್ ಸರ್ಬ್ ಸೈನಿಕರು ನಡೆಸಿದ ಮಾರಣಹೋಮದ 20ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಶನಿವಾರ ಸ್ರೆಬ್ರೇನಿಕಾದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಅವರು ಸ್ಮಾರಕದ ಮುಂದೆ ಹೂಗುಚ್ಛ ಇಡುತ್ತಿದ್ದಂತೆ ಅಲ್ಲಿ ನೆರೆದಿದ್ದ ಸಾವಿರಾರು ಮಂದಿ ಏಕಾಏಕಿ ಪ್ರಧಾನಿ ಮೇಲೆ ಕಲ್ಲು, ಬಾಟಲಿಗಳನ್ನು ಎಸೆಯಲು ಆರಂಭಿಸಿದರು. ಆಗ ಅನಿವಾರ್ಯವಾಗಿ ಪ್ರಧಾನಿ ಅವರು ತಮ್ಮ ಅಂಗರಕ್ಷಕರ ಹಿಂದೆ ಮರೆಯಾಗಿ ನಿಲ್ಲಬೇಕಾಯಿತು. ಈ ವೇಳೆ ಸಾರ್ವಜನಿಕರು ಎಸೆದ ಕಲ್ಲೊಂದು ಪ್ರಧಾನಿ ಅವರ ತಲೆಗೂ ತಾಗಿದೆ. ಅವರ ಕನ್ನಡ ಕೂಡ ಒಡೆದು ಹೋಗಿದೆ ಎನ್ನಲಾಗಿದೆ. ಸರ್ಬಿಯಾ ಹಾಗೂ ಬೋಸ್ನಿಯನ್ ಸರ್ಬ್ ರಾಜಕಾರಣಿಗಳು ಈ ಜನಾಂಗೀಯ ಹತ್ಯೆ ಯನ್ನು ತಳ್ಳಿಹಾಕುತ್ತಲೇ ಬಂದಿದ್ದರು. ಆದರೆ, ಈ ಘಟನೆಗೆ ಸಂಬಂಧಿಸಿ ಎರಡು ಅಂತಾರಾಷ್ಟ್ರೀಯ ನ್ಯಾಯಮಂಡಳಿಗಳು 1990 ದಶಕದಲ್ಲಿ ನಡೆದ ಹತ್ಯೆಯನ್ನು ಮಾರಣಹೋಮ ಎಂದು ಕರೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT