ಪಾಕಿಸ್ತಾನ 
ವಿದೇಶ

ಭಾರತ-ಪಾಕ್ ನ ಅಸ್ಥಿರ ಸಂಬಂಧ ಮುಗ್ಧ ನಾಗರಿಕರ ಮೇಲೆ ಪರಿಣಾಮ ಬೀರುತ್ತಿದೆ: ಪಾಕ್ ಪತ್ರಿಕೆ

ಭಾರತ-ಪಾಕಿಸ್ತಾನ ನಡುವಿನ ಅಸ್ಥಿರ ದ್ವಿಪಕ್ಷೀಯ ಸಂಬಂಧ ಮುಗ್ಧ ನಾಗರಿಕರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಪಾಕಿಸ್ತಾನ ಪತ್ರಿಕೆಯೊಂದು ಸಂಪಾದಕೀಯ ಬರೆದಿದಿದೆ.

ಇಸ್ಲಾಮಾಬಾದ್: ಭಾರತ-ಪಾಕಿಸ್ತಾನ ನಡುವಿನ ಅಸ್ಥಿರ ದ್ವಿಪಕ್ಷೀಯ ಸಂಬಂಧ ಮುಗ್ಧ ನಾಗರಿಕರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಪಾಕಿಸ್ತಾನ ಪತ್ರಿಕೆಯೊಂದು ಸಂಪಾದಕೀಯ ಬರೆದಿದಿದೆ.
ಎಲ್ಒಸಿಯಲ್ಲಿರುವ ವಾತಾವರಣದ ಬಗ್ಗೆ ದಿ ನೇಷನ್ ಪತ್ರಿಕೆ ಸಂಪಾದಕೀಯ ಪ್ರಕಟಿಸಿದ್ದು, 2003 ರ ಭಾರತ- ಪಾಕಿಸ್ತಾನ ಒಪ್ಪಂದವನ್ನು ಜಾರಿ ಮಾಡುವ ಬಗ್ಗೆ ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ ಹೇಳಿಕೆಯನ್ನು ಉಲ್ಲೇಖಿಸಲಾಗಿದ್ದು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ಸೂಕ್ತ ಕಾಲ ಎಂದು ಹೇಳಿದೆ.    
ಭಯೋತ್ಪಾದನೆ ಬೆಳವಣಿಗೆಗೆ ಸಂಬಂಧಿಸಿದಂತೆ ಭಾರತ ಪಾಕಿಸ್ತಾನವನ್ನು ನಿರಂತರವಾಗಿ ದೂಷಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ಬಗ್ಗೆ ಸಣ್ಣ ಘಟನೆಗಳನ್ನು ಉದಾಹರಿಸಿ ಪಾಕಿಸ್ತಾನದ ವಿರುದ್ಧ ಆರೋಪ ಮಾಡಿದ್ದರು. ಅಲ್ಲದೇ ಭಯೋತ್ಪಾದನೆಗೆ ನೆಲೆ ನೀಡುವ ರಾಷ್ಟ್ರಗಳ ವಿರುದ್ಧ ಮಾನವೀಯ ಮೌಲ್ಯಗಳಿಗೆ ಮಹತ್ವ ನಿಡುವ ರಾಷ್ಟ್ರಗಳು ಒಂದಾಗಬೇಕೆಂದು ಕರೆ ನೀಡಿದ್ದರು, ಇಂತಹ ದ್ವೇಷದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪತ್ರಿಕೆ ಅಭಿಪ್ರಾಯಪಟ್ಟಿದೆ.
ಉಭಯ ದೇಶಗಳ ಅಸ್ಥಿರ ದ್ವಿಪಕ್ಷೀಯ ಸಂಬಂಧದಿಂದಾಗಿ ಮುಗ್ಧ ನಾಗರಿಕರು ಬಳಲುತ್ತಿರುವುದನ್ನು ಯಾವ ಅಂತಾರಾಷ್ಟ್ರೀಯ ಮಾನವೀಯ ಸಂಸ್ಥೆಗಳೂ ಗಮನಿಸಿಲ್ಲ ಎಂದು ಪಾಕ್ ಪತ್ರಿಕೆ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT