ಹಫೀಜ್ ಸೈಯ್ಯದ್ 
ವಿದೇಶ

ಮುಂಬೈ ದಾಳಿ ರೂವಾರಿ ಹಫೀಜ್ ಸೈಯ್ಯದ್ ಎಲ್ ಇಟಿ ಉಗ್ರನೆಂದು ಒಪ್ಪಿದ ಪಾಕಿಸ್ತಾನ

ಮುಂಬಯಿ ದಾಳಿಯ ರೂವಾರಿ ಹಫೀಜ್ ಸೈಯ್ಯದ್ ಹಾಗೂ ಎಫ್‌ಐಎಫ್‌ ಸಂಘಟನೆಗಳು ಲಷ್ಕರೆ ತಯ್ಬಾದ ಇತರ ಭಾಗಗಳೆಂದು ಪಾಕಿಸ್ತಾನ ಒಪ್ಪಿಕೊಂಡಿದೆ.,,

ಇಸ್ಲಾಮಾಬಾದ್‌: ಉಗ್ರ ಸಂಘಟನೆಗಳ ಬಗ್ಗೆ ಯಾವುದೇ ವರದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದೆ. ಭಯೋತ್ಪಾದನೆಯನ್ನು ಹತ್ತಿಕ್ಕುವ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ,  ಜಮಾತ್‌ ಉದ್‌ ದವಾ ಸೇರಿದಂತೆ ಯಾವ ಉಗ್ರ ಸಂಘಟನೆಗಳ ಬಗ್ಗೆಯೂ ವರದಿ ಹಾಗೂ ಜಾಹೀರಾತನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಪಾಕಿಸ್ತಾನ ಸರ್ಕಾರ ತಾಕೀತು ಮಾಡಿದೆ.

ಲಷ್ಕರೆ ಇ ತಯ್ಬಾ, ಜೆಯುಡಿ, ಫಲಾ-ಏ-ಇನ್ಸಾನಿಯತ್(ಎಫ್‌ಐಎಫ್‌) ಕುರಿತ ವರದಿ ಪ್ರಸಾರ ಮಾಡದಂತೆ ಎಲ್ಲ ಟಿವಿ ಚಾನೆಲ್‌, ರೇಡಿಯೋ ಸ್ಟೇಷನ್‌ಗಳಿಗೆ ಪಾಕಿಸ್ತಾನದ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರಿ ಅಧಿಸೂಚನೆ ಹೊರಡಿಸಿದೆ.

ಇನ್ನು ಮುಂಬಯಿ ದಾಳಿಯ ರೂವಾರಿ ಹಫೀಜ್ ಸೈಯ್ಯದ್ ಹಾಗೂ ಎಫ್‌ಐಎಫ್‌ ಸಂಘಟನೆಗಳು ಲಷ್ಕರೆ ತಯ್ಬಾದ ಇತರ ಭಾಗಗಳೆಂದು ಪಾಕಿಸ್ತಾನ ಒಪ್ಪಿಕೊಂಡಿದೆ.

ಟಿವಿ ಹಾಗೂ ಎಫ್‌ಎಂ ರೇಡಿಯೋಗಳು ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಲ್ಲಿ ದಂಡ ಇಲ್ಲವೇ ಪರವಾನಗಿ ರದ್ದು ಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ನಿಷೇಧಿತ 60 ಸಂಘಟನೆಗಳು ಸೇರಿದಂತೆ ಇತರೆ 12 ಭಯೋತ್ಪಾದಕ ಸಂಘಟನೆಗಳ ಮೇಲೆ ಪಾಕ್ ಸರ್ಕಾರ ಹದ್ದಿನ ಕಣ್ಣಿಟ್ಟಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT