ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ (ಸಂಗ್ರಹ ಚಿತ್ರ) 
ವಿದೇಶ

ಭಾರತದ ವಿರುದ್ಧ ನೇಪಾಳ ಪ್ರಧಾನಿ ಆಕ್ರೋಶ

ಟಿಬೆಟ್ ಸಮಸ್ಯೆ ಮತ್ತು ನೇಪಾಳದಲ್ಲಿ ಮಾನವ ಹಕ್ಕು ಉಲ್ಲಂಘನೆ ಕುರಿತಂತೆ ವಿಶ್ವಸಂಸ್ಥೆಯಲ್ಲಿ ಭಾರತ ವಿಷಯ ಪ್ರಸ್ತಾಪಿಸಿದ್ದನ್ನು ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ವಿರೋಧಿಸಿದ್ದಾರೆ...

ಕಠ್ಮಂಡು: ಟಿಬೆಟ್ ಸಮಸ್ಯೆ ಮತ್ತು ನೇಪಾಳದಲ್ಲಿ ಮಾನವ ಹಕ್ಕು ಉಲ್ಲಂಘನೆ ಕುರಿತಂತೆ ವಿಶ್ವಸಂಸ್ಥೆಯಲ್ಲಿ ಭಾರತ ವಿಷಯ ಪ್ರಸ್ತಾಪಿಸಿದ್ದನ್ನು ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ವಿರೋಧಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನೇಪಾಳ ಪ್ರಧಾನಿ ಒಲಿ ಅವರು, ದಶಕಗಳ ಹಿಂದಿನ ಯುದ್ಧಾಪರಾಧ ಪ್ರಕರಣದ ಕುರಿತು ಇದೇ ಮೊದಲ ಬಾರಿಗೆ ಭಾರತ ಪ್ರಸ್ತಾಪನೆ ಮಾಡುತ್ತಿದ್ದು, ಅದೂ ಕೂಡ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಈ ವಿಚಾರವನ್ನೇಕೆ ಪ್ರಸ್ತಾಪಿಸಿದೆ? ಪ್ರಕರಣ ನಡೆದು ದಶಕಗಳ ಬಳಿಕ ಈ ವಿಚಾರ ಪ್ರಸ್ತಾಪಿಸುವ ಅವಶ್ಯಕತೆ ಏನಿತ್ತು ಎಂದು ಒಲಿ ಪ್ರಶ್ನಿಸಿದ್ದಾರೆ. ಅಲ್ಲದೆ ಭಾರತದ ಕ್ರಮದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, ವಿಶ್ವಸಂಸ್ಥೆ ಕೂಡ ನೇಪಾಳದಲ್ಲಿ ಶಾಂತಿ ಸ್ಥಾಪನೆಗಾಗಿ ಶ್ರಮಿಸುತ್ತಿದೆ. ಈ ವಿಚಾರ ಭಾರತಕ್ಕೆ ತಿಳಿಯದೇ? ಎಂದು ಹೇಳಿದ್ದಾರೆ.

"ಈ ಹಿಂದೆ ಯಾವುದೇ ದ್ವಿಪಕ್ಷೀಯ ವೇದಿಕೆಯಲ್ಲಿ ಭಾರತ ಈ ವಿಚಾರದ ಬಗ್ಗೆ ಪ್ರಸ್ತಾಪವೇ ಮಾಡಿರಲಿಲ್ಲ. ಇದೀಗ ಏಕಾಏಕಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿದೆ'' ಎಂದು ಒಲಿ ಹೇಳಿದ್ದಾರೆ.

ಜಿನಿವಾದಲ್ಲಿ ನಡೆದ ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ ಸಭೆಯಲ್ಲಿ ಮಾತನಾಡಿದ್ದ ಭಾರತದ ಸದಸ್ಯರು, ನೇಪಾಳ ವಿಚಾರ ಪ್ರಸ್ತಾಪಿಸಿದ್ದರು. ನೇಪಾಳದಲ್ಲಿ ಹಿಂಸೆಗೆ ಒಳಗಾದವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನೇಪಾಳ ಸರ್ಕಾರ ಸತ್ಯ ಮತ್ತು ಸಾಮರಸ್ಯ ಸಮಿತಿ ರಚನೆ ಮಾಡಬೇಕು ಮತ್ತು ಸಮಿತಿಯ ಶಿಫಾರಸುಗಳನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರುವುದಷ್ಟೇ ಅಲ್ಲದೇ, ಹಿಂಸಾತ್ಮಕ ಬಂಡಾಯ ಪ್ರಕ್ರಿಯೆಲ್ಲಿ ಪಾಲ್ಗೊಂಡಿದ್ದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

ಇದು ನೇಪಾಳ ಸರ್ಕಾರವನ್ನು ಕೆಣಕಿದ್ದು, ಪ್ರಧಾನಿ ಒಲಿ ಅವರು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT