ಸುಷ್ಮಾ ಸ್ವರಾಜ್ 
ವಿದೇಶ

ಪ್ರವಾಸಿ ಭಾರತೀಯ ದಿವಸ್ ಗೆ ಫ್ರಾನ್ಸ್ ಭಯೋತ್ಪಾದಕರ ಕರಿ ನೆರಳು

ಫ್ರಾನ್ಸ್ ನಲ್ಲಿ ನಡೆದಿರುವ ಭಯೋತ್ಪಾದಕರ ದಾಳಿ ಲಾಸ್ ಏಂಜಲೀಸ್ ನಲ್ಲಿ ನಡೆಯಬೇಕಿದ್ದ ಪ್ರವಾಸಿ ಭಾರತೀಯ ದಿವಸ್ ಮೇಲೆ ಕರಿ ನೆರಳು ಬೀರಿದೆ.

ಲಾಸ್ ಏಂಜಲೀಸ್: ಫ್ರಾನ್ಸ್ ನಲ್ಲಿ ನಡೆದಿರುವ ಭಯೋತ್ಪಾದಕರ ದಾಳಿ ಲಾಸ್ ಏಂಜಲೀಸ್ ನಲ್ಲಿ ನಡೆಯಬೇಕಿದ್ದ ಪ್ರವಾಸಿ ಭಾರತೀಯ ದಿವಸ್ ಮೇಲೆ ಕರಿ ನೆರಳು ಬೀರಿದೆ. ಪ್ರವಾಸಿ ಭಾರತೀಯ ದಿವಸ್ ನ್ನು ಉದ್ಘಾಟಿಸಬೆಕಿದ್ದ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಮಾರ್ಗ ಮಧ್ಯದಿಂದಲೇ ವಾಪಸ್ಸಾಗಿದ್ದಾರೆ.
ನ.15 ರಿಂದ ಪ್ರಾದೇಶಿಕ ಪ್ರವಾಸಿ ಭಾರತೀಯ ದಿವಸ್ ಪ್ರಾರಂಭವಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಜನರು ಫ್ರಾನ್ಸ್ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ಉಗ್ರರ ದಾಳಿಗೆ ಬಲಿಯಾದ ಜನರಿಗೆ ಸಂತಾಪ ಸೂಚಿಸಿದ್ದರು. 
ಪ್ರವಾಸಿ ಭಾರತೀಯ ದಿವಸ್ ನ್ನು ಸುಷ್ಮಾ ಸ್ವರಾಜ್ ಉದ್ಘಾಟಿಸಬೇಕಿತ್ತು. ಆದರೆ ಉಗ್ರರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಅಮೆರಿಕಾಗೆ ತೆರಳುತ್ತಿದ್ದವರು ಮಾರ್ಗ ಮಧ್ಯದಿಂದಲೇ ನವದೆಹಲಿಗೆ ವಾಪಸ್ಸಾಗಿದ್ದಾರೆ. ಸುಷ್ಮಾ ಸ್ವರಾಜ್ ಬದಲಿಗೆ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ.ಕೆ ಸಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ 1,000 ಭಾರತೀಯ- ಅಮೆರಿಕನ್ನರು ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಮೆರಿಕದ ಸಂಸದರೊಬ್ಬರು ಫ್ರಾನ್ಸ್ ದಾಳಿ ಬಗ್ಗೆ ಮಾತನಾಡಿದ್ದು 2008 ರ ಮುಂಬೈ ದಾಳಿಯ ಮಾದರಿಯಲ್ಲೇ ದಾಳಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT