ಶರ್ಯಾರ್ ಖಾನ್ 
ವಿದೇಶ

ಭಾರತದಲ್ಲಿ ಕ್ರಿಕೆಟ್ ಆಡುವ ಪ್ರಶ್ನೆಯೇ ಇಲ್ಲ: ಪಿಸಿಬಿ ಮುಖ್ಯಸ್ಥ ಶರ್ಯಾರ್ ಖಾನ್

ಭಾರತ-ಪಾಕ್ ದ್ವಿಪಕ್ಷೀಯ ಸರಣಿಯನ್ನು ಭಾರತದಲ್ಲಿ ಆಡುವ ಪ್ರಶ್ನೆಯೇ ಇಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶರ್ಯಾರ್ ಖಾನ್ ಸ್ಪಷ್ಟ ಪಡಿಸಿದ್ದಾರೆ. ...

ಲಾಹೋರ್ : ಭಾರತ-ಪಾಕ್ ದ್ವಿಪಕ್ಷೀಯ ಸರಣಿಯನ್ನು ಭಾರತದಲ್ಲಿ ಆಡುವ ಪ್ರಶ್ನೆಯೇ ಇಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶರ್ಯಾರ್ ಖಾನ್ ಸ್ಪಷ್ಟ ಪಡಿಸಿದ್ದಾರೆ.

ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಭಾರತ-ಪಾಕ್ ಕ್ರಿಕೆಟ್ ಸರಣಿಯನ್ನು ಡಿಸೆಂಬರ್ ನಲ್ಲಿ ಆಯೋಜಿಸಲು ಪಾಕಿಸ್ತಾನಕ್ಕೆ ಆಹ್ವಾನ ನೀಡಿದ ಬೆನ್ನಲ್ಲೇ ಶರ್ಯಾರ್ ಖಾನ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ- ಪಾಕ್ ಸರಣಿಯನ್ನು ಯುಎಇಯಲ್ಲಿ ಆಡುವುದಾದರೇ ಮಾತ್ರ ತಾನು ಭಾಗವಹಿಸುವುದಾಗಿ ಪಿಸಿಬಿ ತಿಳಿಸಿದೆ. ಪಾಕಿಸ್ತಾನದ ಜೊತೆಗೆ ಯುಎಇಯಲ್ಲಿ ಕ್ರಿಕೆಟ್ ಆಡಲು ಭಾರತ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಈ ಹಿಂದೆ ಹೇಳಿದ್ದರು.

ಆದರೆ, ಯಾವುದೇ ಕಾರಣಕ್ಕೂ ಭಾರತದಲ್ಲಿ ಪಾಕಿಸ್ತಾನ ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎಂದು ಕಡ್ಡಿ ತುಂಡು ಮಾಡುವಂತೆ ಹೇಳಿರುವ ಪಿಸಿಬಿ, ಯುಎಇಯಲ್ಲಿ ಭಾರತ ಆಡದಿರಲು ಏನು ಕಾರಣ ಎಂಬುದನ್ನು ಸ್ಪಷ್ಟಪಡಿಸುವಂತೆ ಪಿಸಿಬಿ ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT