ಚೀನಾ ಅಧಿಕಾರಿಗಳೊಂದಿಗೆ ರಾಜನಾಥ್ ಸಿಂಗ್ ಸಭೆ 
ವಿದೇಶ

ಭಯೋತ್ಪಾದನಾ ನಿಗ್ರಹ ಸಹಕಾರದ ಬಗ್ಗೆ ಭಾರತ-ಚೀನಾ ಚರ್ಚೆ

ಭಯೋತ್ಪಾದನೆ ವಿರುದ್ಧದ ಹೋರಾಟ ಹಾಗೂ ಅಂತರರಾಷ್ಟ್ರೀಯ ಮಟ್ಟದ ಅಪರಾಧ ತಡೆಗಟ್ಟಲು ಭಾರತ-ಚೀನಾ ದ್ವಿಪಕ್ಷೀಯ ಸಹಕಾರ ಬಲಪಡಿಸಿಕೊಳ್ಳಬೇಕು ಎಂದು ಚೀನಾ ಅಧಿಕಾರಿ ಹೇಳಿದ್ದಾರೆ.

ಬೀಜಿಂಗ್: ಭಯೋತ್ಪಾದನೆ ವಿರುದ್ಧದ ಹೋರಾಟ ಹಾಗೂ ಅಂತರರಾಷ್ಟ್ರೀಯ ಮಟ್ಟದ ಅಪರಾಧ ತಡೆಗಟ್ಟಲು ಭಾರತ-ಚೀನಾ ದ್ವಿಪಕ್ಷೀಯ ಸಹಕಾರ ಬಲಗೊಳ್ಳಬೇಕು ಎಂದು ಚೀನಾ ಅಧಿಕಾರಿ ಮೆಂಗ್ ಜಿಯಾಂಝು ಹೇಳಿದ್ದಾರೆ.
ಕಮ್ಯುನಿಷ್ಟ್ ಪಕ್ಷದ ರಾಜಕೀಯ ಮತ್ತು ಕಾನೂನು ವ್ಯವಹಾರಗಳ ಆಯೋಗದ ಮುಖ್ಯಸ್ಥರಾಗಿರುವ ಮೆಂಗ್ ಜಿಯಾಂಝ್, ಬೀಜಿಂಗ್ ನಲ್ಲಿ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದು, ಭಯೋತ್ಪಾದನೆ ನಿಗ್ರಹದ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಗಡಿ ಪ್ರವೇಶ ಮತ್ತು ನಿರ್ಗಮನದ ಆಡಳಿತ ಸುಧಾರಿಸಲು ಚೀನಾ-ಭಾರತ ಒತ್ತು ನೀಡಬೇಕು, ಈ ಮೂಲಕ ಗಡಿ ಭಾಗದಲ್ಲಿ ಶಾಂತಿ ವಾತಾವರಣ ನಿರ್ಮಾಣವಾಗಲು ಪರಸ್ಪರ ಸಹಕರಿಸಬೇಕೆಂದು ಮೆಂಗ್ ಅಭಿಪ್ರಾಯಪಟ್ಟಿದ್ದಾರೆ. ಚೀನಾ ಸಲಹೆಗೆ ಪ್ರತಿಕ್ರಿಯೆ ನೀಡಿರುವ ರಾಜನಾಥ್ ಸಿಂಗ್, ಭಾರತ ಗೃಹ ಸಚಿವಾಲಯ ಚೀನಾದೊಂದಿಗಿನ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಗೊಳಿಸಲು ಸಿದ್ಧವಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT