ನೇಪಾಳ-ಭಾರತ(ಸಾಂದರ್ಭಿಕ ಚಿತ್ರ) 
ವಿದೇಶ

ಭಾರತದೊಂದಿಗಿನ ರಾಜತಾಂತ್ರಿಕ ಬಿಕ್ಕಟ್ಟು ಬಗೆಹರಿಸಲು ನೇಪಾಳದಿಂದ ಸಮಿತಿ ರಚನೆ

ಭಾರತದೊಂದಿಗಿನ ರಾಜಕೀಯ-ರಾಜತಾಂತ್ರಿಕ ಬಿಕ್ಕಟ್ಟನ್ನು ಬಗೆಹರಿಸಿಕೊಳ್ಳಲು ನೇಪಾಳ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ.

ಕಠ್ಮಂಡು: ಭಾರತದೊಂದಿಗಿನ ರಾಜಕೀಯ-ರಾಜತಾಂತ್ರಿಕ ಬಿಕ್ಕಟ್ಟನ್ನು ಬಗೆಹರಿಸಿಕೊಳ್ಳಲು ನೇಪಾಳ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ.
ಹೊಸ ಸಂವಿಧಾನವನ್ನು ವಿರೋಧಿಸಿ ನೇಪಾಳದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಭಾರತದಿಂದ ಪೂರೈಕೆಯಾಗಬೇಕಿದ್ದ ಸರಕುಗಳು ತುಂಬಿರುವ ಲಾರಿಗಳು ನೇಪಾಳದ ಗಡಿ ಭಾಗದಲ್ಲೇ ಸ್ಥಗಿತಗೊಂಡಿದೆ. ಈ ಬೆಳವಣಿಗೆಯಿಂದ ನೇಪಾಳಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಎದುರಾಗಿದೆ.
ನೇಪಾಳದ ಗಡಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ್ನು ಬಗೆಹರಿಸಿಕೊಳ್ಳಲು ನೇಪಾಳದ ಸರ್ಕಾರ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ನೇಪಾಳದ ವಿದೇಶಾಂಗ ಸಚಿವ ಮಹೇಂದ್ರ ಬಹದ್ದೂರ್ ಪಾಂಡೆ ಸಮಿತಿಯ ನೇತೃತ್ವ ವಹಿಸಿದ್ದು, ಮುಖ್ಯ ಕಾರ್ಯದರ್ಶಿ ಸೋಮ್ ಲಾಲ್ ಸುಬೇಡಿ ವಾಣಿಜ್ಯ ಮತ್ತು ಸರಬರಾಜು ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿದ್ದಾರೆ.  ತ್ರಿಸದಸ್ಯ ಸಮಿತಿ ಸದಸ್ಯರು ಸದ್ಯದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದು, ಕೇಂದ್ರ ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಉನ್ನತಮಟ್ಟದ ಸಭೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel