ಸಾಂದರ್ಭಿಕ ಚಿತ್ರ 
ವಿದೇಶ

ಭಾರತ ಗಲಭೆ ಪೀಡಿತ ದೇಶ ಎಂದ ಅಮೆರಿಕ ವರದಿ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾಂತಂತ್ರ್ಯದ ಬಗ್ಗೆ ಅಮೆರಿಕ ಕಾಂಗ್ರೆಸ್ ನೀಡಿರುವ ೨೦೧೪ರ ವರದಿಗೆ ಭಾರತ ಹೆಚ್ಚಿನ ಮಹತ್ವ ನೀಡದೆ ನಿರ್ಲಕ್ಷ್ಯ ತೋರಿದೆ...

ನವದೆಹಲಿ: ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾಂತಂತ್ರ್ಯದ ಬಗ್ಗೆ ಅಮೆರಿಕ ಕಾಂಗ್ರೆಸ್ ನೀಡಿರುವ ೨೦೧೪ರ ವರದಿಗೆ ಭಾರತ ಹೆಚ್ಚಿನ ಮಹತ್ವ ನೀಡದೆ ನಿರ್ಲಕ್ಷ್ಯ ತೋರಿದೆ.

ಅಮೆರಿಕದ ಆಡಳಿತ ಮಂಡಳಿಯ ಈ ಆಂತರಿಕ ವರದಿಯಲ್ಲಿ ಭಾರತದಲ್ಲಿ ಧಾರ್ಮಿಕ ಕಾರಣಗಳಿಗೆ ಹತ್ಯೆಗಳು, ಬಂಧನಗಳು, ಕೋಮುಗಲಭೆಗಳು ಮತ್ತು ಜ್ವಲಂತ ಚರ್ಚೆಗಳು ಹೆಚ್ಚಾಗಿವೆ  ಎಂದು ಉಖಿಸಲಾಗಿದೆ. “ದೇಶದ ಸಂವಿಧಾನ ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲ ಪ್ರಜೆಗಳಿಗೂ ಸಮಾನ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಹಕ್ಕುಗಳನ್ನು ಕಲ್ಪಿಸಿದೆ. ಯಾರೇ ಎಲ್ಲೆ ಮೀರಿದಲ್ಲಿ ಅದನ್ನು ನಿಯಂತ್ರಿಸಲು ನ್ಯಾಯಾಂಗ, ಪತ್ರಿಕಾ ಮಾಧ್ಯಮ, ಮಾನವ ಹಕ್ಕು ಆಯೋಗಗಳಿವೆ. ಆದ್ದರಿಂದ ಆ ವರದಿಗೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ" ಎಂದು ವಿದೇಶಾಂಗ ವ್ಯವಹಾರ ಸಚಿವಾಲಯದ ಬಾತ್ಮಿದಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.

ಇದೇ ವೇಳೆ ಈ ಸಭೆಗೆ ನಿಯೋಜಿತರಾಗಿರುವ ಅಮೆರಿಕದ ರಾಯಭಾರಿ ಡೇವಿಡ್ ಸ್ಯಾಪರ್ ಸ್ಟೀನ್ ವರದಿಯ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ಮೋದಿ ಸರ್ಕಾರದ ಸಹಿಷ್ಣುತೆ ಮತ್ತು ನಾಗರೀಕ ವರ್ತನೆಗಳನ್ನು ಕಾರ್ಯಾನುಷ್ಟಾನಕ್ಕೆ ತರಲು ಅಮೆರಿಕ ಪ್ರೋತ್ಸಾಹಿಸುತ್ತದೆ ಎಂದಿದ್ದಾರೆ. ಈ ವರದಿ ಯುಪಿಎ ಎರಡನೇ ಬಾರಿ ಅಧಿಕಾರಕ್ಕೆ ಬಂದಾಗಿನ ಅವಧಿಯದಾಗಿದ್ದು, ಕಳೆದ ವರ್ಷ ಮೇ  ೨೬ರ ವರೆಗಿನ ಘಟನೆಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT