ನೇಪಾಳದ ಮೊದಲ ಮಹಿಳಾ ರಾಷ್ಟ್ರಪತಿ ಬಿಧ್ಯಾ ದೇವಿ ಬಂಡಾರಿ 
ವಿದೇಶ

ನೇಪಾಳ: ಮೊದಲ ಮಹಿಳಾ ರಾಷ್ಟ್ರಪತಿಯಾಗಿ ಬಿಧ್ಯಾದೇವಿ ಆಯ್ಕೆ

ನೇಪಾಳದ ಮೊದಲ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾದ ಬಿಧ್ಯಾ ದೇವಿ ಬಂಡಾರಿಯವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಗುರುವಾರ ಅಭಿನಂದನೆ ಸಲ್ಲಿಸಿದ್ದಾರೆ...

ಕಠ್ಮಂಡು: ನೇಪಾಳದ ಮೊದಲ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾದ ಬಿಧ್ಯಾ ದೇವಿ ಬಂಡಾರಿಯವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಗುರುವಾರ ಅಭಿನಂದನೆ ಸಲ್ಲಿಸಿದ್ದಾರೆ.

ನಿನ್ನೆ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಬಿದ್ಯಾ ದೇವಿ ಭಂಡಾರಿ ಅವರು ನೇಪಾಳಿ ಕಾಂಗ್ರೆಸ್ ಎದುರಾಳಿ ಕುಲ್ ಬಹದ್ದೂರ್ ಗುರಾಂಗ್ ಅವರನ್ನು ಸೋಲಿಸಿ ಮೊದಲ ಮಹಿಳಾ ರಾಷ್ಟ್ರಪತಿಯಾಗಿ ಹೊರಹೊಮ್ಮಿದ್ದಾರೆ.

ನೇಪಾಳದ ಮೊದಲ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಬಿಧ್ಯಾ ದೇವಿಯವರಿಗೆ ಇಂದು ಪ್ರಣಬ್ ಮುಖರ್ಜಿಯವರು ಶುಭಾಶಯ ಹೇಳಿದ್ದು, ಈ ಬಾರಿ ನೇಪಾಳದಲ್ಲಿ ನಡೆದ ರಾಷ್ಟ್ರಪತಿ ಚುನಾವಣೆ ನೇಪಾಳದ ಇತಿಹಾಸವನ್ನೇ ಬದಲಿಸಿದೆ. ನಿಮ್ಮ ಮಾರ್ಗದರ್ಶನದಿಂದ ನೇಪಾಳವು ಮುಂದಿನ ದಿನಗಳಲ್ಲಿ ಶಾಂತಿ, ಭದ್ರತೆ ಹಾಗೂ ಅಭಿವೃದ್ಧಿಗಳಲ್ಲಿಲ್ಲಿ ಉತ್ತಮ ರೀತಿಯಲ್ಲಿ ಯಶಸ್ವಿ ಸಾಧಿಸಲಿದೆ ಎಂಬುದರ ಬಗ್ಗೆ ನನಗೆ ನಂಬಿಕೆಯಿದೆ ಎಂದು ಹೇಳಿದ್ದಾರೆ.

ಉತ್ತಮ ಗೆಳಯ ಹಾಗೂ ನೆರೆರಾಷ್ಟ್ರವಾಗಿ ಭಾರತ ನೇಪಾಳದೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಂಡು ಹೋಗಲಿದೆ. ನಮ್ಮಿಂದ ಸಾಧ್ಯವಾದಷ್ಟು ಸಹಾಯ ಹಾಗೂ ಬೆಂಬಲವನ್ನು ನೇಪಾಳಕ್ಕೆ ನೀಡುತ್ತೇವೆ. ನೇಪಾಳ-ಭಾರತದ ನಡುವಿನ ಸಂಬಂಧವನ್ನು ಉತ್ತಮಗೊಳಿಸಲು ನೇಪಾಳದೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಸಿಪಿಎನ್-ಯುಎಂಎಲ್ ಉಪಾಧ್ಯಕ್ಷೆಯಾಗಿದ್ದ ಬಿಧ್ಯಾ ದೇವಿಯವರು 1991ರಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಕಮ್ಯೂನಿಸ್ಟ್ ನಾಯಕ ಮದನ್ ಭಂಡಾರಿಯವರ ಪತ್ನಿಯಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಚೇತರಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT