ಛೋಟಾ ರಾಜನ್ 
ವಿದೇಶ

ಬಾಲಿಯಲ್ಲಿ ಛೋಟಾ ರಾಜನ್ ಭೇಟಿ ಮಾಡಿದ ಭಾರತೀಯ ಅಧಿಕಾರಿ

ಬಂಧನಕ್ಕೊಳಗಾಗಿರುವ ಭೂಗತ ಪಾತಕಿ ಛೋಟಾ ರಾಜನ್ ನನ್ನು ಭಾರತೀಯ ಅಧಿಕಾರಿಯೊಬ್ಬರು...

ಇಂಡೋನೇಷ್ಯಾ: ಬಂಧನಕ್ಕೊಳಗಾಗಿರುವ ಭೂಗತ ಪಾತಕಿ ಛೋಟಾ ರಾಜನ್ ನನ್ನು ಭಾರತೀಯ ಅಧಿಕಾರಿಯೊಬ್ಬರು ಭಾನುವಾರ ಭೇಟಿಯಾಗಿದ್ದಾರೆ. 
ಬಾಲಿಗೆ ತೆರಳಿರುವ ಭಾರತೀಯ ರಾಯಭಾರಿ ಕಚೇರಿಯ ಮೊದಲ ಕಾರ್ಯದರ್ಶಿ ಸಂಜೀವ್ ಅಗರ್ವಾಲ್ ಅವರು ಛೋಟಾ ರಾಜನ್ ನನ್ನು ಭೇಟಿಯಾಗಿದ್ದು, ರಾಜನ್ ಬಂಧನದ ನಂತರ ಭೇಟಿಯಾದ ಭಾರತದ ಮೊದಲ ಅಧಿಕಾರಿಯಾಗಿದ್ದಾರೆ. 
ಛೋಟಾ ರಾಜನ್ ಇಲ್ಲಿನ ಕಾರಾಗೃಹದಲ್ಲಿ ಆರೋಗ್ಯವಾಗಿದ್ದಾರೆ ಎಂದು ಇಂಡೋನೇಷ್ಯಾದ ಪೊಲೀಸರು ತಿಳಿಸಿದ್ದಾರೆ. ಛೋಟಾ ರಾಜನ್ ಓರ್ವ ಅಂತಾರಾಷ್ಟ್ರೀಯ ಅಪರಾಧಿ ಎಂದು ಸಾಬೀತಾಗಿದ್ದು, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಯಾವುದೇ ಅಡೆತಡೆ ಇಲ್ಲ ಎಂದು ತಿಳಿಸಿದ್ದರು. 
ಇನ್ನು ಇಂಡೋನೇಷ್ಯಾ ಪೊಲೀಸರ ವಶದಲ್ಲಿರುವ ಛೋಟಾ ರಾಜನ್‌‌ನನ್ನು ಶೀಘ್ರವೇ ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ಉಭಯ ರಾಷ್ಟ್ರಗಳ ಸರ್ಕಾರಗಳು ಮಾತುಕತೆ ನಡೆಸಲಿದ್ದು, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಭೇಟಿ ಬಳಿಕ ದಾಖಲೆಗಳನ್ನು ಬದಲಾಯಿಸಿಕೊಳ್ಳಲಾಗುತ್ತದೆ ಎಂದು ಸಂಜೀವ್ ಅಗರ್ವಾಲ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT