ವಿಶ್ವಸಂಸ್ಥೆಯಲ್ಲಿ ನಡೆದ ಸಂಸತ್ತು ಅಧ್ಯಕ್ಷರ 4ನೇ ವಿಶ್ವ ಸಮ್ಮೇಳನದಲ್ಲಿ ಲೋಕಸಭಾಧ್ಯಕ್ಷ ಸುಮಿತ್ರಾ ಮಹಾಜನ್ 
ವಿದೇಶ

ಶ್ರೀಮಂತ ದೇಶಗಳಿಗೆ ಜಾಗತಿಕ ಪರಿಸರವನ್ನು ರಕ್ಷಿಸುವ ಹೊಣೆ ಇದೆ: ಸುಮಿತ್ರಾ ಮಹಾಜನ್

ಜಾಗತಿಕ ಪರಿಸರವನ್ನು ರಕ್ಷಿಸುವ ಜವಾಬ್ದಾರಿಯನ್ನು ಅಭಿವೃದ್ಧಿಶೀಲ ದೇಶಗಳು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದ...

ವಿಶ್ವಸಂಸ್ಥೆ: ಜಾಗತಿಕ ಪರಿಸರವನ್ನು ರಕ್ಷಿಸುವ ಜವಾಬ್ದಾರಿಯನ್ನು ಅಭಿವೃದ್ಧಿಶೀಲ ದೇಶಗಳು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದ ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್, ಇದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಶ್ರೀಮಂತರು ತಮ್ಮ ಸಬ್ಸಿಡಿ ಸಿಲಿಂಡರನ್ನು ಬಿಟ್ಟು ಬಡವರಿಗೆ ನೀಡುವಂತೆ ಕರೆ ನೀಡಿರುವುದನ್ನು ಉದಾಹರಣೆ ಕೊಟ್ಟರು.

 ವಿಶ್ವಸಂಸ್ಥೆಯಲ್ಲಿ ನಡೆಯುತ್ತಿರುವ ಸಂಸತ್ತು ಅಧ್ಯಕ್ಷರ 4ನೇ ವಿಶ್ವ ಸಮ್ಮೇಳನದಲ್ಲಿ ಮಾತನಾಡಿದ ಅವರು, ಜಾಗತಿಕ ಸಂರಕ್ಷಣೆಗೆ ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಮಾತ್ರ ಪ್ರಯತ್ನಿಸಿದರೆ ಸಾಲದು ಎಂದು ಹೇಳಿದರು.

ಜಾಗತಿಕ ಸಂರಕ್ಷಣೆಗೆ ಅಭಿವೃದ್ಧಿಶೀಲ ದೇಶಗಳೂ ಕೂಡ ಒಟ್ಟಾಗಿ ಮುಂದೆ ಬಂದು ಶ್ರಮಿಸಬೇಕು. ಹವಾಮಾನ ವೈಪ್ಯರೀತ್ಯದಿಂದ ಉಂಟಾಗುತ್ತಿರುವ ತೊಂದರೆಯನ್ನು ಆರ್ಥಿಕ ಮತ್ತು ತಾಂತ್ರಿಕ ಸಂಪನ್ಮೂಲಗಳಿಂದ ಬಗೆಹರಿಸಬೇಕು ಎಂದು ಹೇಳಿದರು.

ನವೆಂಬರ್ ನಲ್ಲಿ ವಿಶ್ವಸಂಸ್ಥೆ ಹವಾಮಾನ ಬದಲಾವಣೆ ಸಮ್ಮೇಳನ ನಡೆಯಲಿದ್ದು, ಅಭಿವೃದ್ದಿ ಹೊಂದುತ್ತಿರುವ ದೇಶಗಳಿಗೆ ಜಾಗತಿಕ ಬಿಸಿ ಏರಿಕೆಯನ್ನು ತಡೆಗಟ್ಟಲು ಕಾರ್ಬನ್ ಹೊಗೆ ಬಿಡುವುದನ್ನು ನಿಯಂತ್ರಣ ಮಾಡಬೇಕೆಂಬ ಒತ್ತಡವಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT