ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಜ್ ಅಜೀಜ್ 
ವಿದೇಶ

ಕಾಶ್ಮೀರ ಒಳಗೊಂಡರೆ ಮಾತ್ರ ಭಾರತದೊಂದಿಗೆ ಚರ್ಚೆ: ಸರ್ತಜ್ ಅಜೀಜ್

ಚರ್ಚೆಯ ವಿಷಯದ ಭಾಗವಾಗಿ ಕಾಶ್ಮೀರವನ್ನು ಒಳಗೊಂಡರೆ ಮಾತ್ರ ಭಾರತದೊಂದಿದೆ ಮಾತುಕತೆ ನಡೆಸಲು ಸಾಧ್ಯ ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ

ಇಸ್ಲಾಮಾಬಾದ್: ಚರ್ಚೆಯ ವಿಷಯದ ಭಾಗವಾಗಿ ಕಾಶ್ಮೀರವನ್ನು ಒಳಗೊಂಡರೆ ಮಾತ್ರ ಭಾರತದೊಂದಿದೆ ಮಾತುಕತೆ ನಡೆಸಲು ಸಾಧ್ಯ ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಜ್ ಅಜೀಜ್ ಮಂಗಳವಾರ ಹೇಳಿದ್ದಾರೆ.

ಕಾಶ್ಮೀರವನ್ನು ಒಳಗೊಂಡಂತೆ ಚರ್ಚಿಸಲು ಉಳಿದಿರುವ ವಿವಾದಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕೆಂಬ ಇಸ್ಲಾಮಾಬಾದ್ ನಿಲುವನ್ನು ಇಡಿ ವಿಶ್ವವೇ ಒಪ್ಪಿಕೊಂಡಿದೆ ಎಂದು ರೇಡಿಯೋ ಪಾಕಿಸ್ತಾನ ವರದಿ ಮಾಡಿದೆ.

ಪಾಕಿಸ್ತಾನದಲ್ಲಿ, ಭಾರತಕ್ಕೆ ಬೇಕಿರುವ ಅಪರಾಧಿ ದಾವುದ್ ಇಬ್ರಾಹಿಂ ಅಡಗಿದ್ದಾನೆ ಎಂಬ ಆರೋಪವನ್ನು ಸರ್ತಜ್ ತಳ್ಳಿಹಾಕಿದ್ದು, ಇದಕ್ಕೆ ದಿಟ್ಟ ಉತ್ತರ ನೀಡಲಾಗುವುದು ಎಂದಿದ್ದಾರೆ,

ಭಾರತ ಗಡಿ ಭದ್ರತಾ ಪಡೆಯ ಕಮ್ಯಾಂಡರ್ ಮತ್ತು ಪಾಕಿಸ್ತಾನ ರೇಂಜರ್ಸ್ ಅಧ್ಯಕ್ಷರ ನಡುವೆ ಬುಧವಾರ ನವದೆಹಲಿಯಲ್ಲಿ ಸಭೆ ನಡೆಯಲಿದ್ದು, ಗಡಿ ನಿಯಂತ್ರಣಾ ರೇಖೆಯಲ್ಲಿ ಉದ್ವಿಗ್ನತೆ ತಗ್ಗಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಲಹೆಗಾರ ಹೇಳಿದ್ದಾರೆ.

೨೦೦೩ ರ ಕನವಿರಾಮ ಒಪ್ಪಂದವನ್ನು ಜಾರಿ ಮಾಡುವ ವಿಷಯವನ್ನು ಸಭೆಯಲ್ಲಿ ಎತ್ತಲಾಗುವುದು ಎಂದು ಸಲಹೆಗಾರ ತಿಳಿಸಿದ್ದು, ಮೊದಲನೆಯ ದಿನದಿಂದಲೂ ಭಾರತ ಸರ್ಕರಾದ ನೀತಿಗಳು ಪಾಕಿಸ್ತಾನಿ ವಿರೋಧಿಯಾಗಿವೆ ಎಂದಿದ್ದಾರೆ ಸರ್ತಜ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT