ಸಲ್ಮಾನ್ ಅಲಿಯಾಸ್ ಅಬ್ದಾಲುಜಿಜ್ 
ವಿದೇಶ

ಹಜ್ ಕಾಲ್ತುಳಿಕ್ಕೆ ಸೌದಿ ರಾಜಕುಮಾರ ಕಾರಣ?

700 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡ ಹಜ್ ಕಾಲ್ತುಳಿತದ ದುರಂತಕ್ಕೆ ಸೌದಿ ರಾಜಕುಮಾರ ಸಲ್ಮಾನ್ ಅಲಿಯಾಸ್ ಅಬ್ದಾಲುಜಿಜ್ ಕಾರಣ ಎಂದು ಅಲ್ಲಿನ ಪತ್ರಿಕೆಯೊಂದು ...

ಮಿನಾ: 700 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡ ಹಜ್ ಕಾಲ್ತುಳಿತದ ದುರಂತಕ್ಕೆ ಸೌದಿ  ರಾಜಕುಮಾರ ಸಲ್ಮಾನ್ ಅಲಿಯಾಸ್ ಅಬ್ದಾಲುಜಿಜ್ ಕಾರಣ ಎಂದು ಅಲ್ಲಿನ ಪತ್ರಿಕೆಯೊಂದು ವರದಿ ಮಾಡಿದೆ. ಹಜ್ ಕಾಲ್ತುಳಿತದಲ್ಲಿ ಸೌದಿ ದೊರೆ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಿದೆ.

ಸೌದಿ ಅರೇಬಿಯಾ ರಾಜ ಸಲ್ಮಾನ್  ಗುರುವಾರ ಬೆಳಗ್ಗೆ ಬಿಗಿ ಭದ್ರತೆಯಲ್ಲಿ ಮೆಕ್ಕಾದಿಂದ 5 ಕಿಮೀ ದೂರದಲ್ಲಿರುವ ಮೀನಾ ಎಂಬ ಪ್ರದೇಶಕ್ಕೆ ಆಗಮಿಸಿದರು. ಈ ವೇಳೆ ರಾಜನ ಪ್ರಯಾಣಕ್ಕೆ ಅನುವು ಮಾಡಿಕೊಳ್ಳಲು ಭಕ್ತರು ಸಾಗುತ್ತಿದ್ದ ರಸ್ತೆಯನ್ನು ಬದಲಾಯಿಸಿದ್ದರಿಂದ ಕಾಲ್ತುಳಿತ ಉಂಟಾಗಲು ಕಾರಣವಾಯ್ತ ಎಂದು ಪತ್ರಿಕೆ ತಿಳಿಸಿದೆ. ಆದರೆ ಪ್ರಕರಣ ಹಿಂದಿನ ಕಾರಣವನ್ನು ಮುಚ್ಚಿ ಹಾಕಲು ಸೌದಿ ಪ್ರಾಧಿಕಾರ ಬೇರೆಯದೆ ಕಥೆ ಕಟ್ಟುತ್ತಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಇನ್ನು ಈ ವರದಿಯನ್ನು ಸೌದಿ ಅರೇಬಿಯಾ ಅಧಿಕಾರಿಗಳು ಅಲ್ಲಗಳೆದಿದ್ದಾರೆ. ಶೀಘ್ರವೇ ಪ್ರಕರಣ ಸಂಬಂಧ ತನಿಖಾ ವರದಿ ತರಿಸಿಕೊಳ್ಳಲಾಗುವುದು ಎಂದು ಸೌದಿ ಆರೋಗ್ಯ ಸಚಿವ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT