ನರೇಂದ್ರ ಮೋದಿ 
ವಿದೇಶ

ಉಗ್ರವಾದವನ್ನು ಧರ್ಮದಿಂದ ಬೇರ್ಪಡಿಸಬೇಕಿದೆ: ನರೇಂದ್ರ ಮೋದಿ

ಉಗ್ರವಾದವನ್ನು ಧರ್ಮದಿಂದ ಬೇರ್ಪಡಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ...

ವಿಶ್ವಸಂಸ್ಥೆ: ಉಗ್ರವಾದವನ್ನು ಧರ್ಮದಿಂದ ಬೇರ್ಪಡಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧದ ಹೋರಾಟದ ಪ್ರಮುಖ ಅಸ್ತ್ರ ಎಂದು ಉಗ್ರವಾದವನ್ನು ಧರ್ಮದಿಂದ ಬೇರ್ಪಡಿಸಬೇಕಿದೆ. ರಾಕ್ಷಸೀ ಪ್ರವೃತ್ತಿಯ ಇಸಿಸ್‌ ಉಗ್ರ ಸಂಘಟನೆಯು ಅಂತಾರಾಷ್ಟ್ರೀಯ ಸಮುದಾಯಕ್ಕೆ ಎದುರಾಗಿರುವ ಅತ್ಯಂತ ಗಂಭೀರ ಹಾಗೂ ಗುರುತರ ಸವಾಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿಶ್ವಸಂಸ್ಥೆಯ ಮಹಾಧಿವೇಶನದ ಪಾರ್ಶ್ವದಲ್ಲಿ ಜೋರ್ಡಾನ್‌ ದೊರೆ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಮೋದಿ, ಯುವಜನರು ಬುದ್ಧಿಪಲ್ಲಟಗೊಂಡು ಭಯೋತ್ಪಾದಕ ಸಂಘಟನೆಗಳಿಗೆ ಸೇರುವುದನ್ನು ತಪ್ಪಿಸಬೇಕಾದ ತುರ್ತು ಅಗತ್ಯವಿದೆ. ಅಂತಾರಾಷ್ಟ್ರೀಯ ಭಯೋತ್ಪಾದನೆ ಮತ್ತು ಐಸಿಸ್‌ ಬೆದರಿಕೆಯನ್ನು ಪರಿಣಾಮಕಾರಿಯಾಗಿ ಮಟ್ಟ ಹಾಕಲು ಜಾಗತಿಕ ಸ್ಪಂದನ ಅಗತ್ಯವಾಗಿದೆ ಎಂದು ಮೋದಿ ಅಭಿಪ್ರಾಯಪಟ್ಟರು.

ಇಸಿಸ ಉಗ್ರ ಸಂಘಟನೆಯು ಅಂತಾರಾಷ್ಟ್ರೀಯ ಸಮುದಾಯವನ್ನು ಪ್ರಕೃತ ಬಹುವಾಗಿ ಕಾಡುತ್ತಿರುವ ಬಹಳ ದೊಡ್ಡ ಸವಾಲಾಗಿದೆ ಎಂದು ಉಭಯ ನಾಯಕರು ತಮ್ಮ ಮಾತುಕತೆಯಲ್ಲಿ ಒಪ್ಪಿಕೊಂಡರೆಂದು ವಿದೇಶ ಸಚಿವಾಲಯದ ವಕ್ತಾರ ವಿಕಾಸ್‌ ಸ್ವರೂಪ್‌ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT