ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ (ಸಂಗ್ರಹ ಚಿತ್ರ) 
ವಿದೇಶ

ಅಪಹರಣಕ್ಕೊಳಗಾದ 39 ಭಾರತೀಯರು ಜೀವಂತವಾಗಿದ್ದಾರೆ: ವಿದೇಶಾಂಗ ಸಚಿವಾಲಯ

ಇಸಿಸ್ ಉಗ್ರರಿಂದ ಅಪಹರಕ್ಕೀಡಾದ 39 ಭಾರತೀಯರು ಜೀವಂತವಾಗಿದ್ದು, ಅವರ ಬಿಡುಗಡೆಗಾಗಿ ಭಾರತ ಸರ್ಕಾರ ಸಕಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ವಿದೇಶಾಂಗ ಸಚಿವಾಲಯವು ಮಂಗಳವಾರ ಹೇಳಿದೆ...

ನ್ಯೂಯಾರ್ಕ್: ಇಸಿಸ್ ಉಗ್ರರಿಂದ ಅಪಹರಕ್ಕೀಡಾದ 39 ಭಾರತೀಯರು ಜೀವಂತವಾಗಿದ್ದು, ಅವರ ಬಿಡುಗಡೆಗಾಗಿ ಭಾರತ ಸರ್ಕಾರ ಸಕಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ವಿದೇಶಾಂಗ ಸಚಿವಾಲಯವು ಮಂಗಳವಾರ ಹೇಳಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು, ಪ್ಯಾಲೇಸ್ಟಿನಿಯನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಅವರನ್ನು ಈಗಾಗಲೇ ಭೇಟಿ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಕುರಿತಂತೆ ಚರ್ಚೆ ನಡೆಸಿದ್ದು, ಈ ವಿಚಾರ ಕುರಿತಂತೆ ಮತ್ತಷ್ಟು ಮಾಹಿತಿಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಮೋದಿ ಅವರ ಮನವಿಗೆ ಸ್ಪಂದನೆ ನೀಡಿರುವ ಅಬ್ಬಾಸ್ ಅವರು, ಬಂಧನಕ್ಕೊಳಗಾಗಿರುವ ಎಲ್ಲಾ 39 ಭಾರತೀಯರು ಜೀವಂತವಾಗಿದ್ದು, ಪ್ರಕರಣ ಸಂಬಂಧ ಹೊರ ಬರುವ ಹೊಸ ಮಾಹಿತಿಗಳನ್ನು ಭಾರತದೊಂದಿಗೆ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆಂದು ಹೇಳಿದ್ದಾರೆ.

ಕಳೆದ ಜೂನ್ ತಿಂಗಳಿನಲ್ಲಿ ಇರಾಕ್ ನ ಮೊಸುಲ್ ನಗರದಲ್ಲಿ ಕಟ್ಟಡವೊಂದನ್ನು ನಿರ್ಮಾಣ ಮಾಡುವ ಕಾರ್ಯದಲ್ಲಿ ನಿರತರಾಗಿದ್ದ ಸುಮಾರು 39 ಭಾರತೀಯರನ್ನು ಇಸಿಸ್ ಉಗ್ರರು ಅಪಹರಿಸಿದ್ದರು. ಹಲವು ತಿಂಗಳು ಕಳೆದರೂ ಅಪಹರಣಕ್ಕೊಳಗಾಗಿದ್ದ ಭಾರತೀಯರ ಕುರಿತಂತೆ ಯಾವುದೇ ಮಾಹಿತಿಗಳು ಲಭ್ಯವಾಗಿರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT