ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ 
ವಿದೇಶ

ಕಾಶ್ಮೀರದಲ್ಲಿ ಶಾಂತಿ ಕದಡಲು ಭಾರತ ಕಾರಣ: ಪಾಕಿಸ್ತಾನ

ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಪಾಕಿಸ್ತಾನ ಸರ್ಕಾರದ ಕ್ರೂರತ್ವವನ್ನು ತೋರಿಸುವ ವಿಡಿಯೋ ಬಹಿರಂಗಗೊಂಡ...

ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಪಾಕಿಸ್ತಾನ ಸರ್ಕಾರದ ಕ್ರೂರತ್ವವನ್ನು ತೋರಿಸುವ ವಿಡಿಯೋ ಬಹಿರಂಗಗೊಂಡ ಒಂದು ದಿನದ ನಂತರ ಅದಕ್ಕೆ ಪಾಕಿಸ್ತಾನ ಖಾರವಾಗಿ ಪ್ರತಿಕ್ರಿಯೆ ನೀಡಿದೆ.

ಪಾಕಿಸ್ತಾನಕ್ಕೆ ಸೇರಿದ ಪ್ರದೇಶದಲ್ಲಿ ಶಾಂತಿ ಕದಡಲು ಭಾರತ ಪ್ರಯತ್ನಿಸುತ್ತಿದ್ದು, ವಿಡಿಯೋದಲ್ಲಿ ತೋರಿಸಿರುವ ಅಂಶ ಸತ್ಯಕ್ಕೆ ದೂರವಾಗಿದೆ. ಭಾರತದ ಮಾಧ್ಯಮಗಳು ಈ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್, ಜಮ್ಮು-ಕಾಶ್ಮೀರದ ಗಡಿ ವಿವಾದಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳಲು ಪಾಕಿಸ್ತಾನ ಬಯಸುತ್ತದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಧಾರದಂತೆ ಬಗೆಹರಿಯಬೇಕಿದ್ದ ಕಾಶ್ಮೀರ ವಿವಾದ ಇಂದಿಗೂ ಇತ್ಯರ್ಥವಾಗದೆ ಉಳಿದಿದೆ ಎಂದು ಹೇಳಿದ್ದಾರೆ.

ವಿವೇಚನಾರಹಿತ ಶಕ್ತಿ ಮೂಲಕ ಕಾಶ್ಮೀರ ಹೋರಾಟ ನಡೆಸಲು ಭಾರತ ನಿರ್ಧರಿಸಿದೆ. ಇದರಿಂದಾಗಿ ಭಾರತ ಆಕ್ರಮಿತ ಕಾಶ್ಮೀರದಲ್ಲಿ ಕಳೆದ ಎರಡು ದಶಕಗಳಲ್ಲಿ 90 ಸಾವಿರಕ್ಕೂ ಹೆಚ್ಚು ಕಾಶ್ಮೀರಿಗಳು ಭಾರತೀಯ ಯೋಧರಿಂದ ಹತರಾಗಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಪಾಕ್ ಪ್ರಧಾನಿ ನವಾಜ್ ಶರೀಫ್ ಅವರು ಭಾಷಣ ಮಾಡುವುದಕ್ಕೆ ಮೊದಲು ಸರ್ತಾಜ್ ಅಜೀಜ್ ಅವರು ಪ್ರತಿಕ್ರಿಯೆ ನೀಡಿರುವುದಾಗಿ ರೇಡಿಯೋ ಪಾಕಿಸ್ತಾನ ವರದಿ ಮಾಡಿದೆ.

ಕಾಶ್ಮೀರ ಜನತೆಯ ನ್ಯಾಯಬದ್ಧ ಹೋರಾಟಕ್ಕೆ ಪಾಕಿಸ್ತಾನ ಯಾವತ್ತೂ ಬೆಂಬಲ ನೀಡುತ್ತದೆ. ಅದೇ ರೀತಿ ಭಾರತದೊಂದಿಗೆ ಯಾವುದೇ ಪೂರ್ವ ನಿಯಮಗಳಿಲ್ಲದೆ ಯಾವುದೇ ಹಂತದಲ್ಲಿಯೂ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಅಜೀಜ್ ತಿಳಿಸಿದ್ದಾರೆ.
ವಿಡಿಯೋದ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಚೌಧರಿ, ಇದೊಂದು ದಾರಿತಪ್ಪಿಸುವ ಪ್ರಚಾರತಂತ್ರ. ಕಾಶ್ಮೀರಿಗಳ ಬಗ್ಗೆ ಪಾಕಿಸ್ತಾನಕ್ಕೆ ಎಂದಿಗೂ ಕರುಣೆಯಿದೆ. ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜ ಹೇಗೆ ಹಾರಾಡುತ್ತಿದೆ ಎಂಬುದನ್ನು ಇಡೀ ವಿಶ್ವವೇ ನೋಡುತ್ತಿದೆ. ನಮ್ಮ ಕಡೆಯಿಂದ ಕಾಶ್ಮೀರದ ಜನರಿಗೆ ರಾಜಕೀಯ, ನೈತಿಕ ಮತ್ತು ರಾಯಭಾರಿ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ದ್ವಂದ್ವ ಹೇಳಿಕೆ, ಬೂಟಾಟಿಕೆ ಮತ್ತು ಪಾಕಿಸ್ತಾನ-ಆಕ್ರಮಿತ ಕಾಶ್ಮೀರದ ಜನರು ಸ್ವಾತಂತ್ರ್ಯವನ್ನು ಬಯಸಿ ಪಾಕಿಸ್ತಾನದ ವಿರುದ್ಧ ಮಾತನಾಡುತ್ತಿರುವ ವಿಡಿಯೋ ನಿನ್ನೆ ಬಹಿರಂಗಗೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT