ಡಾ.ಬಿ ಆರ್ ಅಂಬೇಡ್ಕರ್ 
ವಿದೇಶ

ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ...

ವಿಶ್ವಸಂಸ್ಥೆ: ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡಲಾಯಿತು. ಈ ಮೂಲಕ ವಿಶ್ವಸಂಸ್ಥೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬೇಡ್ಕರ್ ಜಯಂತಿ ಆಚರಿಸಿ, ಅವರನ್ನು ಶ್ಲಾಘನೆ ಮಾಡಲಾಗಿದೆ. 
ಅಂಬೇಡ್ಕರ್ ಅವರು ಸಮಾಜ ಸುಧಾರಕ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ಮತ್ತು ಧ್ವನಿ ನೀಡುವ ಮೂಲಕ ಜಾಗತಿಕ ವ್ಯಕ್ತಿಯಾಗಿ ರೂಪಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಉನ್ನತ ಅಧಿಕಾರಿಗಳು ಅಂಬೇಡ್ಕರ್ ಅವರನ್ನು ಬಣ್ಣಿಸಿದ್ದಾರೆ. 
ಇದೇ ವೇಳೆ ಅಂಬೇಡ್ಕರ್ ಅವರ ಆಶಯ ಈಡೇರಿಕೆ ಭಾರತದೊಂದಿಗೆ ಕೆಲಸ ಮಾಡಲು ವಿಶ್ವಸಂಸ್ಥೆ ಸಿದ್ಧವಿದೆ ಎಂದು ಹೇಳಿದೆ. ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ(ಯುಎನ್ ಡಿಪಿ)ಆಡಳಿತಾಧಿಕಾರಿ ಹೆಲನ್ ಕ್ಲರ್ಕ್ ತಮ್ಮ ಭಾಷಣದಲ್ಲಿ ಅಂಬೇಡ್ಕರ್ ಜಯಂತಿ ಪ್ರಮುಖ ಕಾರ್ಯಕ್ರಮವನ್ನು ವಿಶ್ವಸಂಸ್ಥೆಯಲ್ಲಿ ಭಾರತ ಆಚರಿಸುತ್ತಿರುವುದಕ್ಕೆ ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT