ನವಾಜ್ ಷರೀಫ್ ಹಾಗೂ ನರೇಂದ್ರ ಮೋದಿ 
ವಿದೇಶ

ಭಾರತದೊಂದಿಗೆ ಶಾಂತಿ ಮಾತುಕತೆ ಮುಂದುವರಿಸುತ್ತೇವೆ: ಪಾಕ್

ಭಾರತದೊಂದಿಗಿನ ತನ್ನ ನಿಲುವಿನಲ್ಲಿ ದಿನಕ್ಕೊಂದು ಹೇಳಿಕೆ ನೀಡುವ ಪಾಕಿಸ್ತಾನ ಇದೀಗ ಹೊಸ ವರಸೆ ಆರಂಭಿಸಿದೆ. ಭಾರತದೊಂದಿಗಿನ...

ಇಸ್ಲಾಮಾಬಾದ್‌ : ಭಾರತದೊಂದಿಗಿನ ತನ್ನ ನಿಲುವಿನಲ್ಲಿ ದಿನಕ್ಕೊಂದು ಹೇಳಿಕೆ ನೀಡುವ ಪಾಕಿಸ್ತಾನ ಇದೀಗ ಹೊಸ ವರಸೆ ಆರಂಭಿಸಿದೆ. ಭಾರತದೊಂದಿಗಿನ ಶಾಂತಿ ಮಾತುಕತೆ ಮುಂದುವರಿಯುತ್ತಲೇ ಇರುತ್ತದೆ, ಭಾರತ ಮುಂದೆ ಬರಬೇಕಾಗಿದೆ ಎಂದು ಹೇಳಿದೆ.

'ಭಾರತದೊಂದಿಗಿನ ಶಾಂತಿ ಮಾತುಕತೆ ಮುಂದುವರಿಯುವುದು ಅನುಮಾನ ಎಂದು ಭಾರತದಲ್ಲಿನ ಪಾಕ್‌ ಹೈಕಮಿಶನರ್‌ ಅಬ್ದುಲ್‌ ಬಾಸಿತ್‌ ಕೆಲ ದಿನಗಳ ಹಿಂದೆ ಹೇಳಿದ್ದರು.ಆದರೆ ಇದೀಗ ಅಲ್ಲಿನ ವಿದೇಶ ವ್ಯವಹಾರಗಳ ಸಚಿವಾಲಯ ವಕ್ತಾರ ನಫೀಸ್‌ ಝಕಾರಿಯಾ, "ಭಾರತದೊಂದಿಗಿನ ಶಾಂತಿ ಮಾತುಕತೆ ಪ್ರಕ್ರಿಯೆಗೆ ಹಾದಿ ಮುಕ್ತವಾಗಿದೆ ಎಂದು ಹೇಳಿದ್ದಾರೆ.

ಇಸ್ಲಾಮಾಬಾದ್ ನಲ್ಲಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಉಭಯ ದೇಶಗಳ ನಡುವಿನ ಸೌಹಾರ್ದ ಸಂಬಂಧ ವೃದ್ಧಿಯಾಗಲು ಶಾಂತಿ ಮಾತುಕತೆಯೊಂದೇ ದಾರಿ ಎಂದು ಹೇಳಿದ್ದಾರೆ. ಮೊನ್ನೆ ಏಪ್ರಿಲ್‌  7ರಂದು ನವದೆಹಲಿಯಲ್ಲಿ ಪಾಕ್‌ ಹೈಕಮಿಶನರ್‌ ಅಬ್ದುಲ್‌ ಬಾಸಿತ್‌‌, "ಭಾರತ-ಪಾಕ್‌ ನಡುವೆ ವಿದೇಶ ಕಾರ್ಯದರ್ಶಿಗಳ ಮಟ್ಟದ ಶಾಂತಿ ಮಾತುಕತೆಯ ಸದ್ಯಕ್ಕೆ ನಡೆಯುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT