ಎಮರೇಟ್ಸ್ ವಿಮಾನ ದುಬೈ ನಲ್ಲಿ ತುರ್ತು ಭೂಸ್ಪರ್ಶ 
ವಿದೇಶ

ತಿರುವನಂತಪುರಂ ನಿಂದ ತೆರಳಿದ್ದ ಎಮರೇಟ್ಸ್ ವಿಮಾನ ದುಬೈ ನಲ್ಲಿ ತುರ್ತು ಭೂಸ್ಪರ್ಶ: ತಪ್ಪಿದ ಭಾರಿ ಅನಾಹುತ

ತಿರುವನಂತಪುರಂ ನಿಂದ ತೆರಳಿದ್ದ ಎಮರೇಟ್ಸ್ ವಿಮಾನವೊಂದು ದುಬೈ ನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಸಂಭಾವ್ಯ ದುರಂತವೊಂದು ತಪ್ಪಿದೆ.

ದುಬೈ: ತಿರುವನಂತಪುರಂ ನಿಂದ ತೆರಳಿದ್ದ ಎಮರೇಟ್ಸ್  ವಿಮಾನವೊಂದು ದುಬೈ ನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಸಂಭಾವ್ಯ ದುರಂತವೊಂದು ತಪ್ಪಿದೆ.

ಬೋಯಿಂಗ್ 777 ವಿಮಾನ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ದುಬೈ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ವಿಮಾನವಾಗಿದ್ದು, ಬಲಭಾಗದ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ವಿಮಾನಕ್ಕೆ ಹರಡುವ ಮುನ್ನ ತುರ್ತು ಭೂಸ್ಪರ್ಶ ಮಾಡಿ ವಿಮಾನದಲ್ಲಿದ್ದ 275 ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ, ನಂತರ ವಿಮಾನ ಹೊತ್ತಿ ಉರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಮಾನದ ಬಲಭಾಗದ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿತು, ನಂತರ ಲ್ಯಾಂಡಿಂಗ್ ಗೇರ್ ಕುಸಿದು ಬಿದ್ದ ಪರಿಣಾಮ ವಿಮಾನ ಲ್ಯಾಂಡ್ ಆಗುವ ವೇಳೆ ಕೆಲ ಕಾಲ ಸ್ಕಿಡ್ ಆಯಿತು ಎಂದು ಪೈಲಟ್ ಮಾಹಿತಿ ನೀಡಿದ್ದಾರೆ. ಘಟನೆಯ ಪರಿಣಾಮ ದುಬೈ ನಿಂದ ತೆರಳಬೇಕಿದ್ದ ವಿಮಾಗಳು ವಿಳಂಬವಾಗಿದ್ದರೆ ದುಬೈ ಗೆ ಬರಬೇಕಿದ್ದ ವಿಮಾನಗಳ ಮಾರ್ಗವನ್ನು ಶಾರ್ಜಾಗೆ ಬದಲಾವಣೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT