ಎಮರೇಟ್ಸ್ ವಿಮಾನ ದುಬೈ ನಲ್ಲಿ ತುರ್ತು ಭೂಸ್ಪರ್ಶ 
ವಿದೇಶ

ತಿರುವನಂತಪುರಂ ನಿಂದ ತೆರಳಿದ್ದ ಎಮರೇಟ್ಸ್ ವಿಮಾನ ದುಬೈ ನಲ್ಲಿ ತುರ್ತು ಭೂಸ್ಪರ್ಶ: ತಪ್ಪಿದ ಭಾರಿ ಅನಾಹುತ

ತಿರುವನಂತಪುರಂ ನಿಂದ ತೆರಳಿದ್ದ ಎಮರೇಟ್ಸ್ ವಿಮಾನವೊಂದು ದುಬೈ ನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಸಂಭಾವ್ಯ ದುರಂತವೊಂದು ತಪ್ಪಿದೆ.

ದುಬೈ: ತಿರುವನಂತಪುರಂ ನಿಂದ ತೆರಳಿದ್ದ ಎಮರೇಟ್ಸ್  ವಿಮಾನವೊಂದು ದುಬೈ ನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಸಂಭಾವ್ಯ ದುರಂತವೊಂದು ತಪ್ಪಿದೆ.

ಬೋಯಿಂಗ್ 777 ವಿಮಾನ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ದುಬೈ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ವಿಮಾನವಾಗಿದ್ದು, ಬಲಭಾಗದ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ವಿಮಾನಕ್ಕೆ ಹರಡುವ ಮುನ್ನ ತುರ್ತು ಭೂಸ್ಪರ್ಶ ಮಾಡಿ ವಿಮಾನದಲ್ಲಿದ್ದ 275 ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ, ನಂತರ ವಿಮಾನ ಹೊತ್ತಿ ಉರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಮಾನದ ಬಲಭಾಗದ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿತು, ನಂತರ ಲ್ಯಾಂಡಿಂಗ್ ಗೇರ್ ಕುಸಿದು ಬಿದ್ದ ಪರಿಣಾಮ ವಿಮಾನ ಲ್ಯಾಂಡ್ ಆಗುವ ವೇಳೆ ಕೆಲ ಕಾಲ ಸ್ಕಿಡ್ ಆಯಿತು ಎಂದು ಪೈಲಟ್ ಮಾಹಿತಿ ನೀಡಿದ್ದಾರೆ. ಘಟನೆಯ ಪರಿಣಾಮ ದುಬೈ ನಿಂದ ತೆರಳಬೇಕಿದ್ದ ವಿಮಾಗಳು ವಿಳಂಬವಾಗಿದ್ದರೆ ದುಬೈ ಗೆ ಬರಬೇಕಿದ್ದ ವಿಮಾನಗಳ ಮಾರ್ಗವನ್ನು ಶಾರ್ಜಾಗೆ ಬದಲಾವಣೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!

ಅಯೋಧ್ಯೆಯ ರಾಜರ್ಷಿ ದಶರಥ್ ವೈದ್ಯಕೀಯ ಕಾಲೇಜ್ ನಲ್ಲಿ ಬಾಂಬ್ ತಯಾರಿಕೆ ಕಾಗದ ಪತ್ತೆ; ವಿದ್ಯಾರ್ಥಿ ಬಂಧನ

Commonwealth Games 2026: ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಸಾಕ್ಷಿ, ಪ್ರಿಯಾ

ಪ್ರಧಾನಿ ಮೋದಿಯನ್ನು ನಿಂದಿಸಿದ 15 ವರ್ಷದ ಹುಡುಗಿ ಹಿಂದೆ 'ಆ ಎರಡು ಗುಂಪುಗಳಿವೆ': ಕಂಗನಾ ಹೊಸ ಬಾಂಬ್!