ಎಮರೇಟ್ಸ್ ವಿಮಾನ ದುಬೈ ನಲ್ಲಿ ತುರ್ತು ಭೂಸ್ಪರ್ಶ 
ವಿದೇಶ

ತಿರುವನಂತಪುರಂ ನಿಂದ ತೆರಳಿದ್ದ ಎಮರೇಟ್ಸ್ ವಿಮಾನ ದುಬೈ ನಲ್ಲಿ ತುರ್ತು ಭೂಸ್ಪರ್ಶ: ತಪ್ಪಿದ ಭಾರಿ ಅನಾಹುತ

ತಿರುವನಂತಪುರಂ ನಿಂದ ತೆರಳಿದ್ದ ಎಮರೇಟ್ಸ್ ವಿಮಾನವೊಂದು ದುಬೈ ನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಸಂಭಾವ್ಯ ದುರಂತವೊಂದು ತಪ್ಪಿದೆ.

ದುಬೈ: ತಿರುವನಂತಪುರಂ ನಿಂದ ತೆರಳಿದ್ದ ಎಮರೇಟ್ಸ್  ವಿಮಾನವೊಂದು ದುಬೈ ನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಸಂಭಾವ್ಯ ದುರಂತವೊಂದು ತಪ್ಪಿದೆ.

ಬೋಯಿಂಗ್ 777 ವಿಮಾನ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ದುಬೈ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ವಿಮಾನವಾಗಿದ್ದು, ಬಲಭಾಗದ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ವಿಮಾನಕ್ಕೆ ಹರಡುವ ಮುನ್ನ ತುರ್ತು ಭೂಸ್ಪರ್ಶ ಮಾಡಿ ವಿಮಾನದಲ್ಲಿದ್ದ 275 ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ, ನಂತರ ವಿಮಾನ ಹೊತ್ತಿ ಉರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಮಾನದ ಬಲಭಾಗದ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿತು, ನಂತರ ಲ್ಯಾಂಡಿಂಗ್ ಗೇರ್ ಕುಸಿದು ಬಿದ್ದ ಪರಿಣಾಮ ವಿಮಾನ ಲ್ಯಾಂಡ್ ಆಗುವ ವೇಳೆ ಕೆಲ ಕಾಲ ಸ್ಕಿಡ್ ಆಯಿತು ಎಂದು ಪೈಲಟ್ ಮಾಹಿತಿ ನೀಡಿದ್ದಾರೆ. ಘಟನೆಯ ಪರಿಣಾಮ ದುಬೈ ನಿಂದ ತೆರಳಬೇಕಿದ್ದ ವಿಮಾಗಳು ವಿಳಂಬವಾಗಿದ್ದರೆ ದುಬೈ ಗೆ ಬರಬೇಕಿದ್ದ ವಿಮಾನಗಳ ಮಾರ್ಗವನ್ನು ಶಾರ್ಜಾಗೆ ಬದಲಾವಣೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT