ಸಾಂದರ್ಭಿಕ ಚಿತ್ರ 
ವಿದೇಶ

ರು.500 ಕೊಡಲಿಲ್ಲವೆಂದು ತಮ್ಮಂದಿರಿಗೆ ಬೆಂಕಿ ಹಚ್ಚಿದ ಅಣ್ಣ!

ರು.500 ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಕೋಪಗೊಂಡ ಅಣ್ಣನೊಬ್ಬ ತನ್ನ ಇಬ್ಬರು ತಮ್ಮಂದಿರಿಗೆ ಬೆಂಕಿ ಹಚ್ಚಿರುವ ಘಟನೆಯೊಂದು ಪಾಕಿಸ್ತಾನದ ಫೈಸಲಾಬಾದ್...

ಫೈಸಲಾಬಾದ್: ರು.500 ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಕೋಪಗೊಂಡ ಅಣ್ಣನೊಬ್ಬ ತನ್ನ ಇಬ್ಬರು ತಮ್ಮಂದಿರಿಗೆ ಬೆಂಕಿ ಹಚ್ಚಿರುವ ಘಟನೆಯೊಂದು ಪಾಕಿಸ್ತಾನದ ಫೈಸಲಾಬಾದ್ ನಲ್ಲಿ ನಡೆದಿದೆ.

ಮುಷ್ತಕ್ ಬೆಂಕಿ ಹಚ್ಚಿದ ಅಣ್ಣನಾಗಿದ್ದು, ತಮ್ಮಂದಿರಾದ ಮೊಹಮ್ಮದ್ ಉಮರ್ ಮತ್ತು ಅಬು ಬಕರ್ ಬಳಿ ರು.500 ಹಣ ನೀಡುವಂತೆ ಕೇಳಿದ್ದಾನೆ. ಹಣ ನೀಡಲು ಉಮರ್ ಮತ್ತು ಅಬು ಬಕರ್ ನಿರಾಕರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತಮ್ಮಂದಿರ ಮೇಲೆ ತೀವ್ರ ಕೋಪಗೊಂಡ ಮುಷ್ತಕ್ ಸ್ಥಳದಲ್ಲಿದ್ದ ಪೆಟ್ರೋಲ್'ನ್ನು ಹಾಕಿ, ಬೆಂಕಿ ಹಚ್ಚಿದ್ದಾನೆ. ನಂತರ ತಾನು ಕೂಡ ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ಸ್ಥಳೀಯರು ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇದೀಗ ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವರದಿಗಳು ತಿಳಿಸಿವೆ.

ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಮುಷ್ತಕ್ ಕುಟುಂಬಸ್ಥರು ತಪ್ಪಾಗಿ ಮಾಹಿತಿ ನೀಡಿದ್ದು, ಘಟನೆ ವೇಳೆ ಮುಷ್ತಕ್ ಮದ್ಯಪಾನ ಮಾಡಿ, ಪ್ರಜ್ಞಾಹೀನನಂತೆ ವರ್ತಿಸುತ್ತಿದ್ದ. ಈ ವೇಳೆ ತಾನು ಏನು ಮಾಡುತ್ತಿದ್ದೇನೆಂಬುದು ಆತನಿಗೇ ತಿಳಿದಿರಲಿಲ್ಲ ಎಂದು ಪ್ರಾಥಮಿಕ ತನಿಖಾ ವರದಿಯಲ್ಲಿ ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT