ಪಾಕಿಸ್ಥಾನ ಸೇನೆ (ಸಂಗ್ರಹ ಚಿತ್ರ) 
ವಿದೇಶ

ಪ್ರಧಾನಿ ಮೋದಿ ಹೇಳಿಕೆ ನಂತರ ಬಲೂಚಿಸ್ಥಾನದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರ ಬಳಕೆ ಮಾಡುತ್ತಿರುವ ಪಾಕಿಸ್ಥಾನ!

ಬಲೂಚಿಸ್ಥಾನದಲ್ಲಿ ಪಾಕಿಸ್ಥಾನ ಸೇನೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಿದೆಯಾದರೂ, ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನಂತರ ಮತ್ತಷ್ಟು ಅಮಾನವೀಯ ದೌರ್ಜನ್ಯ ನಡೆಯಲು ಪ್ರಾರಂಭವಾಗಿದೆ.

ನವದೆಹಲಿ: ಬಲೂಚಿಸ್ಥಾನದಲ್ಲಿ ಪಾಕಿಸ್ಥಾನ ಸೇನೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಿದೆಯಾದರೂ, ಪ್ರಧಾನಿ ನರೇಂದ್ರ ಮೋದಿ ಅವರು ಬಲೂಚಿಸ್ಥಾನದ ಸ್ವಾತಂತ್ರ್ಯವನ್ನು ಉಲ್ಲೇಖಿಸಿದ ನಂತರ ಮತ್ತಷ್ಟು ಅಮಾನವೀಯ ದೌರ್ಜನ್ಯ ನಡೆಯಲು ಪ್ರಾರಂಭವಾಗಿರುವ ಬಗ್ಗೆ ವರದಿ ಪ್ರಕಟವಾಗಿದೆ.

ಕಾರ್ಯಕರ್ತರ ದೂರಿನ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ಥಾನದ ಬಗ್ಗೆ ಮಾತನಾಡಿದ ಬಳಿಕ ಪಾಕಿಸ್ಥಾನ ಸೇನೆ ಅಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡಲು ಪ್ರಾರಂಭಿಸಿದೆ ಎಂದು ಆರೋಪಿಸಿದ್ದಾರೆ.

ಪಾಕಿಸ್ಥಾನ ಸೇನೆ ಆಗಸ್ಟ್ 15 ರಂದು ಪಾಕಿಸ್ಥಾನ 100 ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದ್ದು, 150 ಜನರನ್ನು ಅಪಹರಣ ಮಾಡಲಾಗಿದೆ ಎಂದು ಬಲೂಚ್ ರಾಷ್ಟ್ರೀಯವಾದಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಪಾಕಿಸ್ಥಾನ ಸೇನೆ ಬಲೂಚಿಸ್ಥಾನದವರನ್ನು ಮೃಗಗಳಿಗಿಂತಲೂ ಕೀಳಾಗಿ ನಡೆಸಿಕೊಳ್ಳುತ್ತಿದೆ ಎಂದು ಸ್ವಾತಂತ್ರ್ಯ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಲೂಚಿಸ್ಥಾನದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಜರ್ಮನಿಯಲ್ಲಿ ಬಲೂಚ್ ರಾಷ್ಟ್ರೀಯವಾದಿಗಳು ಪ್ರತಿಭಟನೆ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT