ಹೃದಯ ಕಲಕುವ ಚಿತ್ರಗಳನ್ನು ಪೋಸ್ಟ್ ಮಾಡಿ, ಪಾಕ್ ಸೇನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಲೂಚಿ ಮಹಿಳೆ 
ವಿದೇಶ

ಬಲೂಚಿಯಲ್ಲಿ ಪಾಕ್ ನರಮೇಧ: ಸೇನೆಯ ದೌರ್ಜನ್ಯಕ್ಕೆ ಸಾಕ್ಷಿಯಾದ ಚಿತ್ರಗಳು

ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆಯ ನರಮೇಧ ದಿನದಿನಕ್ಕೆ ಹೆಚ್ಚುತ್ತಲೇ ಇದ್ದು, ಇದಕ್ಕೆ ಸಾಕ್ಷಿಯೆಂಬಂತೆ ಸಾಮಾಜಿಕ ಜಾಲತಾಣವೊಂದರಲ್ಲಿ ಬಲೂಚಿಸ್ತಾನದಲ್ಲಿರುವ ಪರಿಸ್ಥಿತಿ ಕುರಿತ ಚಿತ್ರಗಳನ್ನು ಪೋಸ್ಟ್ ಮಾಡಿ ಬಲೂಚಿಸ್ತಾನ ಮಹಿಳೆಯೊಬ್ಬರು ಪಾಕಿಸ್ತಾನ...

ನವದೆಹಲಿ: ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆಯ ನರಮೇಧ ದಿನದಿನಕ್ಕೆ ಹೆಚ್ಚುತ್ತಲೇ ಇದ್ದು, ಇದಕ್ಕೆ ಸಾಕ್ಷಿಯೆಂಬಂತೆ ಸಾಮಾಜಿಕ ಜಾಲತಾಣವೊಂದರಲ್ಲಿ ಬಲೂಚಿಸ್ತಾನದಲ್ಲಿರುವ ಪರಿಸ್ಥಿತಿ ಕುರಿತ ಚಿತ್ರಗಳನ್ನು ಪೋಸ್ಟ್ ಮಾಡಿ ಬಲೂಚಿಸ್ತಾನ ಮಹಿಳೆಯೊಬ್ಬರು ಪಾಕಿಸ್ತಾನ ಸೇನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಲೂಚಿಸ್ತಾನದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಅತೀವ್ರವಾಗಿದ್ದು, ಪ್ರಾಣಿಗಳಿಗಿರುವಷ್ಟು ಹಕ್ಕು ಬಲೂಚಿಸ್ತಾನದಲ್ಲಿರುವ ಮನುಷ್ಯರಿಗಿಲ್ಲದಂತಾಗಿದೆ ಎಂದು ಹೇಳಿ ಅಲ್ಲಿನ ಜನತೆ ಪ್ರತೀನಿತ್ಯ ಪ್ರತಿಭಟನೆಗಳನ್ನು ನಡೆಸುತ್ತಲೇ ಇದ್ದಾರೆ. ಅಲ್ಲದೆ, ಮಾನವ ಹಕ್ಕುಗಳ ದಿನಾಚರಣೆಯನ್ನು ಘೋಷಣೆ ಮಾಡಿರುವ ವಿಶ್ವಸಂಸ್ಥೆ, ಬಲೂಚಿಸ್ತಾನದಲ್ಲಿ ನರಮೇಧಗಳಂತಹ ಕೃತ್ಯಗಳು ನಡೆಯುತ್ತಿದ್ದರೂ ಮೌನವಹಿಸಿರುವುದಕ್ಕೆ ಬಲೂಚಿಸ್ತಾನದಲ್ಲಿರುವ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆಯೇ ಪಾಕಿಸ್ತಾನದ ದೌರ್ಜನ್ಯ ಹಾಗೂ ನರಮೇಧಕ್ಕೆ ಸಾಕ್ಷಿಯೆಂಬಂತೆ ಮಹಿಳೆಯೊಬ್ಬರು ಬಲೂಚಿಸ್ತಾನದಲ್ಲಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಪಾಕಿಸ್ತಾನ ಸರ್ಕಾರ ಹಾಗೂ ಸೇನೆಯ ವಿರುದ್ಧ ತೀವ್ರ ಆಕ್ರೋಶಗಳನ್ನು ವ್ಯಕ್ತಪಡಿಸಿದ್ದಾರೆ.

ಮಹಿಳೆಯ ಹಂಚಿಕೊಂಡಿರುವ ಚಿತ್ರಗಳು ಹೃದಯ ಕಲಕುವಂತಿದ್ದು, ರಸ್ತೆಗಳ ಎಕ್ಕೆಲಗಳಲ್ಲೂ ಮನುಷ್ಯರ ಮೃತ ದೇಹಗಳು, ಸಾಮಾನ್ಯ ಜನರ ಮೇಲೆ ಪಾಕಿಸ್ತಾನ ಸೇನೆ ನಡೆಸುತ್ತಿರುವ ದೌರ್ಜನ್ಯಗಳನ್ನು ಎತ್ತಿತೋರಿಸುತ್ತಿದೆ. ಅಲ್ಲದೆ, ಅಂತಿಮ ಸಂಸ್ಕಾರವಿಲ್ಲದೆಯೇ ಮೃತ ದೇಹಗಳು ರಸ್ತೆಗಳ ಮಧ್ಯೆಯೇ ಬಿದ್ದಿರುವುದು ಬಲೂಚಿಸ್ತಾನದಲ್ಲಿರುವ ಪರಿಸ್ಥಿತಿಯನ್ನು ಬಿಂಬಿಸುತ್ತಿದೆ.

ಬಾನುಕ್ ಶ್ರೀನಿ ಬಲೂಚ್ ಎಂಬುವವರು ಟ್ವಿಟರ್ ನಲ್ಲಿ ಈ ಚಿತ್ರಗಳನ್ನು ಹಂಚಿಕೆ ಮಾಡಿದ್ದು, ಪಾಕಿಸ್ತಾನದಿಂದ ವಿಶ್ವವನ್ನು ರಕ್ಷಿಸಿ. ಪಾಕಿಸ್ತಾನ ವಿಶ್ವಕ್ಕೆ ಮಾರಕವಾದ ದೇಶವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರವಾಗಿದ್ದು, ವಿಶ್ವ ಸಮುದಾಯ ಇದನ್ನು ಬಹಿರಂಗ ಪಡಿಸಬೇಕಿದೆ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT