ಘಟನಾ ಸ್ಥಳಕ್ಕೆ ದೌಡಾಯಿಸುವ ಅಗ್ಮಿಶಾಮಕ ದಳದ ಸಿಬ್ಬಂದಿಗಳು 
ವಿದೇಶ

ಬರ್ಲಿನ್ ಕ್ರಿಸ್'ಮಸ್ ಮಾರುಕಟ್ಟೆಯಲ್ಲಿ ಶಂಕಿತ ಉಗ್ರರ ದಾಳಿ: 9 ಮಂದಿ ದುರ್ಮರಣ

ಬರ್ಲಿನ್ ಕ್ರಿಸ್ ಮಸ್ ಮಾರುಕಟ್ಟೆಯಲ್ಲಿ ಶಂಕಿತರ ಉಗ್ರರು ದಾಳಿ ಮಾಡಿದ್ದು, ಜನನಿ ಬಿಡ ಪ್ರದೇಶದ ಮೇಲೆ ಟ್ರಕ್ ನುಗ್ಗಿಸಿದ ಪರಿಣಾಮ 9 ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ನಡೆದಿದೆ...

ಬರ್ಲಿನ್: ಬರ್ಲಿನ್ ಕ್ರಿಸ್ ಮಸ್ ಮಾರುಕಟ್ಟೆಯಲ್ಲಿ ಶಂಕಿತರ ಉಗ್ರರು ದಾಳಿ ಮಾಡಿದ್ದು, ಜನನಿ ಬಿಡ ಪ್ರದೇಶದ ಮೇಲೆ ಟ್ರಕ್ ನುಗ್ಗಿಸಿದ ಪರಿಣಾಮ 9 ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ನಡೆದಿದೆ.

ಕ್ರಿಸ್ ಮಸ್ ಹಬ್ಬ ಹತ್ತಿರ ಬರುತ್ತಿದ್ದು, ಐಕೋನಿಕ್ ಕೈಸರ್ ವಿಲ್ಹೆಲ್ಮ್ ಮೆಮೋರಿಯಲ್ ಚರ್ಚ್ ಬಳಿರುವ ಕ್ರಿಸ್'ಮಸ್ ಮಾರುಕಟ್ಟೆ ರಸ್ತೆ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ಸಂದರ್ಭವನ್ನೇ ಎದುರು ನೋಡುತ್ತಿದ್ದ ಶಂಕಿತ ಉಗ್ರರು ಜನನಿಬಿಡ ಪ್ರದೇಶದ ಮೇಲೆ ಟ್ರಕ್ ನುಗ್ಗಿಸಿದ್ದಾರೆ. ಪರಿಣಾಮ ಸ್ಥಳದಲ್ಲಿ 9 ಮಂದಿ ಸಾವನ್ನಪ್ಪಿ, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ಬ್ರೈಟ್ಸಚೀಡ್ ಪ್ಲಾಟ್ಜಾ ನಗರದ ಬಳಿ ಘಟನೆ ನಡೆಸಿದ್ದು, ಈಗಾಗಲೇ ಶಂಕಿತರನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಕಪ್ಪುಬಣ್ಣದ ಟ್ರಕ್ ವೊಂದು ವೇಗಗತಿಯಲ್ಲಿ ಬಂದು ಇದ್ದಕ್ಕಿದ್ದಂತೆ ಜನರ ಮೇಲೆ ಹೋಗಿತ್ತು. ಈ ವೇಳೆ ಜನರು ಜೋರಾಗಿ ಕಿರುಚಾಡಲು ಆರಂಭಿಸಿದ್ದರು. ನಂತರ ಅಪಾಯದಲ್ಲಿ ಸಿಲುಕಿದ್ದ ಕೆಲವರನ್ನು ರಕ್ಷಣೆ ಮಾಡಿದೆ. ಸ್ಥಳದಲ್ಲಿ ಎಲ್ಲಿ ನೋಡಿದರೂ ರಕ್ತವೇ ಕಾಣಿಸುತ್ತಿತ್ತು ಎಂದು ಸ್ಥಳೀಯ ಒ'ನೀಲ್ ಎಂಬುವವರು ಘಟನೆಯ ಭೀಕರತೆಯನ್ನು ವಿವರಿಸಿದ್ದಾರೆ.

ಟ್ರಕ್ ನಲ್ಲಿದ್ದ ಎಲ್ಲಾ ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶಂಕಿತ ಉಗ್ರರು ದಾಳಿ ನಡೆಸಿದ್ದಾರೆಂದು ಶಂಕೆಗಳು ವ್ಯಕ್ತವಾಗುತ್ತಿದ್ದು, ಘಟನೆ ಕುರಿತಂತೆ ಮಾಹಿತಿ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಣೇಶೋತ್ಸವಕ್ಕೆ ಅನಗತ್ಯ ನಿರ್ಬಂಧ ಇಲ್ಲ, ಆದ್ರೆ ಅಶಾಂತಿ ಸೃಷ್ಟಿಸಲು ಬಿಜೆಪಿ ಕುತಂತ್ರ: CM ಡಿ.ಕೆ ಶಿವಕುಮಾರ್ ಕಿಡಿ

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ದೂರ; 'ಮುಂದಿನ ಜನ್ಮ ಇದ್ದರೆ ನಿನ್ನವನಾಗಿ ಹುಟ್ಟುವೆ' ಎಂದು ಪೋಸ್ಟ್ ಹಾಕಿ ಯುವಕ ಆತ್ಮಹತ್ಯೆ!

ಸರ್ಕಾರಿ ಸರ್ಕ್ಯೂಟ್‌ ಹೌಸ್‌ನಲ್ಲಿ 'ನೀಲಿ ಚಿತ್ರನಟಿ' ವಾಸ; ರೂರ್ಕೆಲಾದಲ್ಲಿ ಸಂಚಲನ, ಪೊಲೀಸ್ ತನಿಖೆ