ಘಟನಾ ಸ್ಥಳಕ್ಕೆ ದೌಡಾಯಿಸುವ ಅಗ್ಮಿಶಾಮಕ ದಳದ ಸಿಬ್ಬಂದಿಗಳು 
ವಿದೇಶ

ಬರ್ಲಿನ್ ಕ್ರಿಸ್'ಮಸ್ ಮಾರುಕಟ್ಟೆಯಲ್ಲಿ ಶಂಕಿತ ಉಗ್ರರ ದಾಳಿ: 9 ಮಂದಿ ದುರ್ಮರಣ

ಬರ್ಲಿನ್ ಕ್ರಿಸ್ ಮಸ್ ಮಾರುಕಟ್ಟೆಯಲ್ಲಿ ಶಂಕಿತರ ಉಗ್ರರು ದಾಳಿ ಮಾಡಿದ್ದು, ಜನನಿ ಬಿಡ ಪ್ರದೇಶದ ಮೇಲೆ ಟ್ರಕ್ ನುಗ್ಗಿಸಿದ ಪರಿಣಾಮ 9 ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ನಡೆದಿದೆ...

ಬರ್ಲಿನ್: ಬರ್ಲಿನ್ ಕ್ರಿಸ್ ಮಸ್ ಮಾರುಕಟ್ಟೆಯಲ್ಲಿ ಶಂಕಿತರ ಉಗ್ರರು ದಾಳಿ ಮಾಡಿದ್ದು, ಜನನಿ ಬಿಡ ಪ್ರದೇಶದ ಮೇಲೆ ಟ್ರಕ್ ನುಗ್ಗಿಸಿದ ಪರಿಣಾಮ 9 ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ನಡೆದಿದೆ.

ಕ್ರಿಸ್ ಮಸ್ ಹಬ್ಬ ಹತ್ತಿರ ಬರುತ್ತಿದ್ದು, ಐಕೋನಿಕ್ ಕೈಸರ್ ವಿಲ್ಹೆಲ್ಮ್ ಮೆಮೋರಿಯಲ್ ಚರ್ಚ್ ಬಳಿರುವ ಕ್ರಿಸ್'ಮಸ್ ಮಾರುಕಟ್ಟೆ ರಸ್ತೆ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ಸಂದರ್ಭವನ್ನೇ ಎದುರು ನೋಡುತ್ತಿದ್ದ ಶಂಕಿತ ಉಗ್ರರು ಜನನಿಬಿಡ ಪ್ರದೇಶದ ಮೇಲೆ ಟ್ರಕ್ ನುಗ್ಗಿಸಿದ್ದಾರೆ. ಪರಿಣಾಮ ಸ್ಥಳದಲ್ಲಿ 9 ಮಂದಿ ಸಾವನ್ನಪ್ಪಿ, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ಬ್ರೈಟ್ಸಚೀಡ್ ಪ್ಲಾಟ್ಜಾ ನಗರದ ಬಳಿ ಘಟನೆ ನಡೆಸಿದ್ದು, ಈಗಾಗಲೇ ಶಂಕಿತರನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಕಪ್ಪುಬಣ್ಣದ ಟ್ರಕ್ ವೊಂದು ವೇಗಗತಿಯಲ್ಲಿ ಬಂದು ಇದ್ದಕ್ಕಿದ್ದಂತೆ ಜನರ ಮೇಲೆ ಹೋಗಿತ್ತು. ಈ ವೇಳೆ ಜನರು ಜೋರಾಗಿ ಕಿರುಚಾಡಲು ಆರಂಭಿಸಿದ್ದರು. ನಂತರ ಅಪಾಯದಲ್ಲಿ ಸಿಲುಕಿದ್ದ ಕೆಲವರನ್ನು ರಕ್ಷಣೆ ಮಾಡಿದೆ. ಸ್ಥಳದಲ್ಲಿ ಎಲ್ಲಿ ನೋಡಿದರೂ ರಕ್ತವೇ ಕಾಣಿಸುತ್ತಿತ್ತು ಎಂದು ಸ್ಥಳೀಯ ಒ'ನೀಲ್ ಎಂಬುವವರು ಘಟನೆಯ ಭೀಕರತೆಯನ್ನು ವಿವರಿಸಿದ್ದಾರೆ.

ಟ್ರಕ್ ನಲ್ಲಿದ್ದ ಎಲ್ಲಾ ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶಂಕಿತ ಉಗ್ರರು ದಾಳಿ ನಡೆಸಿದ್ದಾರೆಂದು ಶಂಕೆಗಳು ವ್ಯಕ್ತವಾಗುತ್ತಿದ್ದು, ಘಟನೆ ಕುರಿತಂತೆ ಮಾಹಿತಿ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT