ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು 
ವಿದೇಶ

ಯುಎನ್ ನಿರ್ಣಯ: ಯುಎನ್ಎಸ್ ಸಿ ಸದಸ್ಯರಿಗೆ ಇಸ್ರೇಲ್ ಪ್ರಧಾನಿ ಸಮನ್ಸ್

ಇಸ್ರೇಲ್ ವಿರುದ್ಧದ ನಿರ್ಣಯ ಅಂಗೀಕಾರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.

ಜೆರುಸಲೇಮ್: ವಿವಾದಿತ ಪ್ರದೇಶ ವೆಸ್ಟ್ ಬ್ಯಾಂಕ್ ನಲ್ಲಿ ನೆಲೆ ಸ್ಥಾಪಿಸಿರುವುದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಇಸ್ರೇಲ್ ವಿರುದ್ಧದ ನಿರ್ಣಯ ಅಂಗೀಕಾರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. 
ಫ್ರಾನ್ಸ್, ಬ್ರಿಟನ್, ಚೀನಾ, ರಷ್ಯಾ, ಸ್ಪೇನ್, ಜಪಾನ್, ಈಜಿಪ್ಟ್, ಅಂಗೋಲಾ, ಉಕ್ರೇನ್ ಹಾಗೂ ಉರುಗ್ವೆ ಸೇರಿದಂತೆ 10 ರಾಷ್ಟ್ರಗಳ ಪ್ರತಿನಿಧಿಗಳು ಜೆರುಸಲೇಮ್ ನಲ್ಲಿರುವ ವಿದೇಶಾಂಗ ಸಚಿವಾಲಯದ ಕೇಂದ್ರ ಕಚೇರಿಗೆ ಆಗಮಿಸಿದ್ದಾರೆ. ಈ ಸಭೆ ರಾಜತಾಂತ್ರಿಕತೆ ಮತ್ತು ಆರ್ಥಿಕವಾಗಿ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದ ಭಾಗವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.   
ಇದಕ್ಕೂ ಮುನ್ನ ನಡೆದ ಸಂಪುಟ ಸಭೆಯಲ್ಲಿ ನೇತನ್ಯಾಹು, ಇಸ್ರೇಲ್ ವಿರುದ್ಧದ ನಿರ್ಣಯವನ್ನು ಬೆಂಬಲಿಸಿದ್ದ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ, " ಭದ್ರತಾ ಮಂಡಳಿಯಲ್ಲಿ ಮಂಡನೆಯಾದ ನಿರ್ಣಯದ ಬೆನ್ನಿಗೆ ಅಮೆರಿಕ ನಿಂತಿತ್ತು ಎಂಬುದರಲ್ಲಿ ಅನುಮಾನವಿಲ್ಲ ಎಂಬ ಇಸ್ರೇಲ್ ಪ್ರಧಾನಿ ಹೇಳಿಕೆಯನ್ನು ಪ್ರಧಾನಿ ಕಾರ್ಯಾಲಯ ಬಿಡುಗಡೆ ಮಾಡಿದೆ. 
ಪ್ಯಾಲೆಸ್ಟೇನ್ ಹಕ್ಕು ಪ್ರತಿಪಾದನೆ ಮಾಡುತ್ತಿರುವ ವಿವಾದಿತ ಪ್ರದೇಶ ವೆಸ್ಟ್ ಬ್ಯಾಂಕ್ ನಲ್ಲಿ ಇಸ್ರೇಲ್ ತನ್ನ ನೆಲೆಯನ್ನು ಸ್ಥಾಪಿಸಿತ್ತು. ಈ ವಿಷಯವಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಇಸ್ರೇಲ್ ವಿರುದ್ಧ ಕೈಗೊಂಡ ನಿರ್ಣಯವನ್ನು ಭದ್ರತಾ ಮಂಡಳಿಯ 14 ರಾಷ್ಟ್ರಗಳು ಬೆಂಬಲಿಸಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT