ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ 
ವಿದೇಶ

ಸಿಂಧೂ ನದಿ ನೀರು ಹಂಚಿಕೆ ವಿವಾದ: ಪಾಕ್ ವಿತ್ತ ಸಚಿವರನ್ನು ಚರ್ಚೆಗೆ ಕರೆದ ವಿಶ್ವಬ್ಯಾಂಕ್ ಅಧ್ಯಕ್ಷ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಸಲುವಾಗಿ ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರು ಪಾಕಿಸ್ತಾನ ಆರ್ಥಿಕ ಸಚಿವರನ್ನು ಆಹ್ವಾನಿಸಿದ್ದಾರೆಂದು...

ವಾಷಿಂಗ್ಟನ್: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಸಲುವಾಗಿ ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರು ಪಾಕಿಸ್ತಾನ ಆರ್ಥಿಕ ಸಚಿವರನ್ನು ಆಹ್ವಾನಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಸಿಂಧೂ ಒಪ್ಪಂದ ರದ್ದಾಗುವ ಭೀತಿ ಎದುರಾಗಿರುವ ಕಾರಣ ಪಾಕಿಸ್ತಾನ ಹಣಕಾಸು ಸಚಿವ ಇಶಾಕ್ ದಾರ್ ಅವರು, ಕೆಲ ದಿನಗಳ ಹಿಂದಷ್ಟೇ ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಅವರಿಗೆ ಪತ್ರವೊಂದನ್ನು ಬರೆದಿದ್ದರು.

ಭಾರತ ಮತ್ತು ಪಾಕಿಸ್ತಾನದ ನಡುವಿನ ವಿವಾದಕ್ಕೆ ಕಾರಣವಾಗಿರುವ ಕಿಶನ್ ಗಂಗಾ ಮತ್ತು ರ್ಯಾಟಲ್ ಜನ ವಿದ್ಯುತ್ ಯೋಜನೆಗಳನ್ನು ತಡೆಹಿಡಿಯುವ ವಿಚಾರದ ಕುರಿತು ಪತ್ರದಲ್ಲಿ ಹೇಳಿಕೊಂಡಿತ್ತು. ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಸಂಬಂಧಿಸಿದಂತೆ ವಿಶ್ವಬ್ಯಾಂಕ್ ತನ್ನ ಕರ್ತವ್ಯವನ್ನು ಪೂರೈಸಬೇಕೆಂದು ಹೇಳಿಕೊಂಡಿತ್ತು.

ಈ ಹಿನ್ನಲೆಯಲ್ಲಿ ಪಾಕಿಸ್ತಾನದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ ಯಾಂಗ್ ಕಿಮ್ ಅವರು, ವಿವಾದ ಕುರಿತಂತೆ ಚರ್ಚೆ ನಡೆಸಲು ಇಶಾಕ್ ದಾರ್ ಅವರಿಗೆ ಆಹ್ವಾನ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನಿವಾರ್ಯ ಪರಿಸ್ಥಿತಿ, ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ, ಹೋಟೆಲ್‌ನವರು 1 ವಾರ ಸಹಿಸಿಕೊಳ್ಳಬೇಕು: ಸಚಿವ ಕೆಎಚ್ ಮುನಿಯಪ್ಪ!

IPLಗೂ ತಟ್ಟಲಿದೆ ಯುದ್ಧದ ಬಿಸಿ: ಐಪಿಎಲ್ ಪಂದ್ಯ ಒಂದಕ್ಕೆ ಬೇಕು 3 ಸಾವಿರ ಲೀಟರ್ ಡೀಸೆಲ್, ಪಂದ್ಯಾವಳಿಗೆ ಬ್ರೇಕ್?

Video: ತನಗೆ ಬೈದಾಗ ಸುಮ್ಮನಿದ್ದ.. ಪತ್ನಿಗೆ ಚಪ್ಪಲಿ ತೋರಿಸುತ್ತಲೇ ಸಿಡಿದೆದ್ದು ಮಹಿಳೆಗೆ ಹಿಗ್ಗಾಮುಗ್ಗ ಥಳಿಸಿದ!

ನಾನು IAS, KAS ಅಧಿಕಾರಿಯಲ್ಲ, ಜನಪ್ರತಿನಿಧಿ: ಬಜೆಟ್ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್!

ಶಾಹಿದ್ ಕಪೂರ್-ರಶ್ಮಿಕಾ ಅಭಿನಯದ 'ಕಾಕ್ಟೇಲ್ 2' ಜೂನ್ 19 ರಂದು ಬಿಡುಗಡೆ

SCROLL FOR NEXT