ಭಾರತ ನಿಲುವಿಗೆ ಟೀಕೆ: ಫೇಸ್‌ಬುಕ್ ನಿರ್ದೇಶಕನನ್ನು ತರಾಟೆಗೆ ತೆಗೆದುಕೊಂಡ ಝುಕರ್ ಬರ್ಗ್ 
ವಿದೇಶ

ಭಾರತ ನಿಲುವಿಗೆ ಟೀಕೆ: ಫೇಸ್‌ಬುಕ್ ನಿರ್ದೇಶಕನನ್ನು ತರಾಟೆಗೆ ತೆಗೆದುಕೊಂಡ ಝುಕರ್ ಬರ್ಗ್

ನೆಟ್ ನ್ಯೂಟ್ರಾಲಿಟಿ ಬಗ್ಗೆ ಭಾರತೆ ತಳೆದಿರುವ ನಿಲುವನ್ನು ಕಟುವಾಗಿ ಟೀಕಿಸಿದ್ದ ಫೇಸ್‌ಬುಕ್ ನಿರ್ದೇಶಕ ಮಾರ್ಕ್ ಆ್ಯಂಡ್ರೀಸನ್ ಅವರನ್ನು ಫೇಸ್‌ಬುಕ್ ಸಿಇಒ ಮಾರ್ಕ್ ಝುಕರ್ ಬರ್ಗ್ ಅವರು ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ...

ನ್ಯೂಯಾರ್ಕ್: ನೆಟ್ ನ್ಯೂಟ್ರಾಲಿಟಿ ಬಗ್ಗೆ ಭಾರತೆ ತಳೆದಿರುವ ನಿಲುವನ್ನು ಕಟುವಾಗಿ ಟೀಕಿಸಿದ್ದ ಫೇಸ್‌ಬುಕ್ ನಿರ್ದೇಶಕ ಮಾರ್ಕ್ ಆ್ಯಂಡ್ರೀಸನ್ ಅವರನ್ನು ಫೇಸ್‌ಬುಕ್ ಸಿಇಒ ಮಾರ್ಕ್ ಝುಕರ್ ಬರ್ಗ್ ಅವರು ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತ ಸರ್ಕಾರ ನೆಟ್ ನ್ಯೂಟ್ರಾಲಿಟಿ ಪರವಾಗಿ ನಿರ್ಧಾರ ಕೈಗೊಂಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ  ಫೇಸ್‌ಬುಕ್ ನ ನಿರ್ದೇಶಕ ಮಾರ್ಕ್ ಆ್ಯಂಡ್ರೀಸನ್ ಅವರು, ನಿನ್ನೆ ಭಾರತದ ನಿಲುವನ್ನು ಟೀಕಿಸಿ ಅವಮಾನವಾಗುವಂತೆ ಟ್ವೀಟ್ ಒಂದನ್ನು ಮಾಡಿದ್ದರು. ಟ್ವೀಟ್ ನಲ್ಲಿ ಭಾರತವು ಬ್ರಿಟೀಷ್ ಆಡಳಿತದಲ್ಲೇ ಇದ್ದಿದ್ದರೆ ಉತ್ತಮವಾಗಿತ್ತು. ತಾರತಮ್ಯದ ಇಂಟರ್ನೆಟ್ ದರಕ್ಕೆ ಭಾರತ ವಿರೋಧ ವ್ಯಕ್ತಪಡಿಸಿರುವುದು ಕೊಲೊನಿಯಲಿಸ್ಟ ವಿರೋಧಿ. ಭಾರತೀಯರು ಮತ್ತೊಮ್ಮೆ ಆರ್ಥಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದರು. ಆ್ಯಂಡ್ರಿಸನ್ ಅವರ ಈ ಟ್ವೀಟ್ ಗೆ ಹಲವಾರು ಭಾರತೀಯರು ವಿರೋಧ ವ್ಯಕ್ತಪಡಿಸಿದ್ದರು.

ಇದೀಗ ಈ ಟ್ವೀಟ್ ನ್ನು ಮಾರ್ಕ್ ಝುಕರ್ ಬರ್ಗ್ ಕೂಡ ವಿರೋಧ ವ್ಯಕ್ತಪಡಿಸಿದ್ದು, ಆ್ಯಂಡ್ರಿಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆ್ಯಂಡ್ರೀಸನ್ ಅವರ ಈ ರೀತಿಯ ಟ್ವೀಟ್ ನಿಜಕ್ಕೂ ಬೇಸರವನ್ನುಂಟುಮಾಡಿದೆ. ಫೇಸ್ ಬುಕ್ ಈ ರೀತಿಯಾಗಿ ಪ್ರಸ್ತುತ ಪಡಿಸುವುದನ್ನು ಒಪ್ಪಿಕೊಳ್ಳುವುದಿಲ್ಲ. ವೈಯಕ್ತಿಕವಾಗಿ ಭಾರತ ನನಗೆ ಪ್ರಮುಖವಾಗಿದೆ. ಭಾರತಕ್ಕೆ ಪ್ರವಾಸಕ್ಕೆಂದು ಹೋದಾಗ ಅಲ್ಲಿನ ಮಾನವೀಯತೆ ನನಗೆ ಬಹಳ ಇಷ್ಟವಾಗಿತ್ತು. ಅವರ ಆತ್ಮವಿಶ್ವಾಸ ಹಾಗೂ ಮೌಲ್ಯಗಳು ಇಷ್ಟವಾಯಿತು. ಪ್ರತಿಯೊಬ್ಬರಿಗೂ ಅವರ ಅನಿಸಿಕೆ ವ್ಯಕ್ತಪಡಿಸುವ ಹಕ್ಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?