ತೆರವು ಕಾರ್ಯಾಚರಣೆ (ಸಾಂಕೇತಿಕ ಚಿತ್ರ) 
ವಿದೇಶ

ಮೆಟ್ರೋ ಮಾರ್ಗಕ್ಕಾಗಿ ಲಾಹೋರ್ ನಲ್ಲಿ ಐತಿಹಾಸಿಕ ಜೈನ ದೇವಾಲಯ ನೆಲಸಮ

ಲಾಹೋರ್ ನಲ್ಲಿ ಐತಿಹಾಸಿಕ ಜೈನ ದೇವಾಲಯವೊಂದನ್ನು ನೆಲಸಮಗೊಳಿಸಲಾಗಿರುವುದನ್ನು ವಿರೋಧಿಸಿ ಹಲವು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ.

ಲಾಹೋರ್: ಲಾಹೋರ್ ನಲ್ಲಿ ಐತಿಹಾಸಿಕ ಜೈನ ದೇವಾಲಯವೊಂದನ್ನು ನೆಲಸಮಗೊಳಿಸಲಾಗಿರುವುದನ್ನು ವಿರೋಧಿಸಿ ಹಲವು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ.
ಆರೆಂಜ್ ಲೈನ್ ಮೆಟ್ರೊ ರೈಲು ಮಾರ್ಗಕ್ಕೆ ಜೈನ ದೇವಾಲಯ ಅಡ್ಡಿಯಾಗಿದ್ದರಿಂದ ಪಾಕ್ ಸರ್ಕಾರ ಈ ಕ್ರಮ ಕೈಗೊಂಡಿದೆ. ಕೇವಲ ಜೈನ ದೇವಾಲಯ ಮಾತ್ರವೇ ಅಲ್ಲದೇ ಮಹಾರಾಜ ಬಿಲ್ಡಿಂಗ್ ಹಾಗೂ ಕಪುರ್ತಲಾಮ್ ಹೌಸ್ ಗಳನ್ನೂ ಸಹ ಅಲ್ಲಿನ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ ಪಂಜಾಬ್ ಅಸೆಂಬ್ಲಿಯ ವಿಪಕ್ಷ ನಾಯಕ ಮಿಯಾನ್ ಮೆಹ್ಮೂದ್ ಉರ್ ರಶೀದ್ ಜೈನ ದೇವಾಲಯ ಹಾಗೂ ಇನ್ನಿತರ ಕಟ್ಟಡಗಳನ್ನು ನೆಲಸಮಗೊಳಿಸುವುದನ್ನು ಖಂಡಿಸಿ ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ದೇವಾಲಯವನ್ನು ನೆಲಸಮಗೊಳಿಸುವ ಬದಲು ಮೆಟ್ರೋ ರೈಲು ಮಾರ್ಗವನ್ನು ಬದಲಾವಣೆ ಮಾಡಬಹುದಾಗಿತ್ತು. ಇಲ್ಲವೇ ಟನಲ್ ತಂತ್ರಜ್ಞಾನ ಬಳಸಿ ದೇವಾಲಯವನ್ನು ಉಳಿಸಬಹುದಾಗಿತ್ತು ಎಂದು ರಶೀದ್ ಹೆಳಿದ್ದಾರೆ. 1992 ರಲ್ಲಿ ಬಾಬ್ರಿ ಮಸೀದಿ ನೆಲಸಮಗೊಂಡ ಸೇಡಿಗೆ ಲಾಹೋರ್ ನಲ್ಲಿದ್ದ ಈ ಜೈನ ದೇವಾಲಯದ ಮೇಲೆಯೂ ದಾಳಿ ನಡೆಸಲಾಗಿತ್ತು. ಅಂದಿನಿಂದ ಈ ದೇವಾಲಯ ಶಿಥಿಲಾವಸ್ಥೆಯಲ್ಲಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT