ಸಾಂದರ್ಭಿಕ ಚಿತ್ರ 
ವಿದೇಶ

ಢಾಕಾದಲ್ಲಿ ಐಎಸ್ ಉಗ್ರರಿಂದ ಅರ್ಚಕನ ಹತ್ಯೆ

ಬಾಂಗ್ಲಾದೇಶದ ಉತ್ತರ ಭಾಗದಲ್ಲಿರುವ ಪಂಚ್‌ಗಢ್ ಜಿಲ್ಲೆಯ ದೇಬೀಗಂಜ್ ಉಪಾಜಿಲಾದಲ್ಲಿರುವ ಸಂತಗೌರ್‌ಹಿಯೋ ದೇವಾಲಯದ ಅರ್ಚಕನನ್ನು ದೇವಾಲಯದ...

ಢಾಕಾ: ಬಾಂಗ್ಲಾದೇಶದ ಉತ್ತರ ಭಾಗದಲ್ಲಿರುವ ಪಂಚ್‌ಗಢ್ ಜಿಲ್ಲೆಯ ದೇಬೀಗಂಜ್ ಉಪಾಜಿಲಾದಲ್ಲಿರುವ ಸಂತಗೌರ್‌ಹಿಯೋ ದೇವಾಲಯದ ಅರ್ಚಕನನ್ನು ದೇವಾಲಯದ ಅಂಗಳದಲ್ಲೇ ಹತ್ಯೆಗೈದ ಘಟನೆಯ ಜವಾಬ್ದಾರಿಯನ್ನು ಇಸ್ಲಾಮಿಕ್ ಸ್ಟೇಟ್ ವಹಿಸಿಕೊಂಡಿದೆ. ಜವಾಬ್ದಾರಿ ವಹಿಸಿಕೊಂಡಿರುವ ಬಗ್ಗೆ ಇಸ್ಲಾಮಿಕ್ ಸ್ಟೇಟ್  ಸಾಮಾಜಿಕ ತಾಣದಲ್ಲಿ ಹೇಳಿಕೆ ನೀಡಿತ್ತು.
50ರ ಹರೆಯದ ಜೋಗೇಶ್ವರ್ ರಾಯ್ ಎಂಬ ಅರ್ಚಕನನ್ನು ಐಎಸ್ ಉಗ್ರರು ಶನಿವಾರ ಹತ್ಯೆಗೈದಿದ್ದರು. ರಾಯ್ ಜತೆಗಿದ್ದ ಇಬ್ಬರು ಸಹಾಯಕರಿಗೆ ಗುಂಡೇಟು ತಗಲಿದೆ. ಮೊಟಾರ್ ಬೈಕಿನಲ್ಲಿ ಬಂದ ಮೂವರು ಆಗಂತುಕರು ಈ ದಾಳಿ ನಡೆಸಿದ್ದಾರೆ.
ದೇವಾಲಯಕ್ಕೆ ಕಲ್ಲು ಬಿಸಾಡಿದ ಸದ್ದು ಕೇಳಿ ಹೊರಗೆ ಬಂದು ನೋಡಿದ ಅರ್ಚಕನನ್ನು ದಾಳಿಕೋರರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ನಂತರ ಕೈಬಾಂಬ್ ಎಸೆದು ಉಗ್ರರು ಪರಾರಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT