ಮೌಲಾನಾ ಮಸೂದ್ ಅಜರ್ 
ವಿದೇಶ

ಅಜರ್ ಬಂಧನ ಯಾವತ್ತೂ ಸಾಧ್ಯವಿಲ್ಲ; ಬಂಧನವಾದರೂ ಏನು ವ್ಯತ್ಯಾಸವಾಗುವುದಿಲ್ಲ: ಪಾಕ್, ಭಾರತಕ್ಕೆ ಜೈಶ್ ತಿರುಗೇಟು

ಪಠಾಣ್ ಕೋಟ್ ವಾಯುನೆಲೆ ದಾಳಿಯ ರೂವಾರಿ, ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್...

ಇಸ್ಲಾಮಾಬಾದ್: ಪಠಾಣ್ ಕೋಟ್ ವಾಯುನೆಲೆ ದಾಳಿಯ ರೂವಾರಿ, ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಬಂಧನ ಯಾವತ್ತೂ ಸಾಧ್ಯವಿಲ್ಲ, ಒಂದು ವೇಳೆ ಬಂಧಿತನಾದರೂ ಅದರಿಂದ ನಮಗೆ ಏನೂ ವ್ಯತ್ಯಾಸವಾಗುವುದಿಲ್ಲ ಎಂದು ಜೈಶ್ ಇ ಮೊಹಮ್ಮದ್ ಸಂಘಟನೆ ಹೇಳಿದೆ.

ಮಸೂದ್ ನಮ್ಮ ಕಸ್ಟಡಿಯಲ್ಲಿದ್ದಾನೆ ಎಂದು ಪಂಜಾಬ್ ಕಾನೂನು ಸಚಿವ ರಾಣಾ ಸನಾವುಲ್ಲಾ ಹೇಳಿದ್ದರೆ, ಮತ್ತೊಂದೆಡೆ ನಮ್ಮ ಸಂಘಟನೆಯ ವರಿಷ್ಠನ ಬಂಧನ ಯಾವತ್ತೂ ಸಾಧ್ಯವಿಲ್ಲ ಎಂದು ಜೈಶ್ ಹೇಳುವ ಮೂಲಕ ಅಜರ್ ಬಂಧನದ ಗೊಂದಲ ಮುಂದುವರಿದಿದೆ.

ನಮ್ಮ ಸಂಘಟನೆಯ ಮುಖ್ಯಸ್ಥನ ಬಂಧನವಾಗಿದೆ ಎಂಬ ಸುದ್ದಿ ಕೇಳಿ ಹಲವರು ಸಂಭ್ರಮಿಸಿರಬಹುದು. ಆದರೆ ಮಸೂದ್ ಬಂಧನ ಯಾವತ್ತೂ ಸಾಧ್ಯವಿಲ್ಲ ಎಂದು ಘೋಷಿಸಿರುವುದಾಗಿ ದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT