ಪಾಕ್ ಪೊಲೀಸರ ಕಸ್ಟಡಿಯಲ್ಲಿರುವ ಮೌಲಾನಾ ಮಸೂದ್ ಅಜರ್ 
ವಿದೇಶ

ಮೌಲಾನಾ ಮಸೂದ್ ಅಜರ್ ನಮ್ಮ ಕಸ್ಟಡಿಯಲ್ಲಿದ್ದಾನೆ: ಪಾಕ್ ಸಚಿವರು

ಪಠಾಣ್ ಕೋಟ್ ವಾಯುನೆಲೆ ಮೇಲೆ ಬಾಂಬ್ ದಾಳಿ ನಡೆಸಿದ ಜೈಶೆ ಇ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಮತ್ತು...

ಇಸ್ಲಾಮಾಬಾದ್ : ಪಠಾಣ್ ಕೋಟ್ ವಾಯುನೆಲೆ ಮೇಲೆ ಬಾಂಬ್ ದಾಳಿ ನಡೆಸಿದ ಜೈಶೆ ಇ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಮತ್ತು ಆತನ ಸಹಚರರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪಾಕಿಸ್ತಾನದ ಸಚಿವರೊಬ್ಬರು ತಿಳಿಸಿದ್ದಾರೆ.

ಮೌಲಾನಾ ಮತ್ತು ಅವನ ಅನುಯಾಯಿಗಳನ್ನು ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪಂಜಾಬ್ ಪ್ರಾಂತ್ಯದ ಕಾನೂನು ಸಚಿವ ರಾಣಾ ಸನೌಲ್ಲ ಡಾನ್ ನ್ಯೂಸ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಪಠಾಣ್ ಕೋಟ್ ದಾಳಿಯಲ್ಲಿ ಮೌಲಾನಾ ಪಾತ್ರ ಇರುವುದು ದೃಢಪಟ್ಟರೆ ಅವನನ್ನು ಬಂಧಿಸುತ್ತೇವೆ ಎಂದು ಹೇಳಿದ್ದಾರೆ.

ಮೌಲಾನಾನನ್ನು ಅವನ ಕೆಲವು ಸ್ನೇಹಿತರು ಮತ್ತು ಸಂಬಂಧಿಗಳೊಂದಿಗೆ ಸೆರೆಹಿಡಿಯಲಾಗಿದೆ ಎಂದು ಎರಡು ದಿನಗಳ ಹಿಂದೆಯೇ ಪಾಕಿಸ್ತಾನ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ವಿದೇಶಾಂಗ ಇಲಾಖೆಯ ವಕ್ತಾರ ವಿಕಾಸ್ ಸ್ವರೂಪ್, ನಮಗೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದ್ದರು. ಪಾಕಿಸ್ತಾನದ ವಿದೇಶಾಂಗ ಇಲಾಖೆ ಕೂಡ ನಿನ್ನೆ ಇದೇ ಮಾಹಿತಿ ನೀಡಿತ್ತು.ಆದರೆ ಈಗ ಪಾಕಿಸ್ತಾನ ಸರ್ಕಾರವೇ ಮೌಲಾನಾ ವಶದ ವಿಷಯವನ್ನು ದೃಢಪಡಿಸಿದೆ.

ಮೊನ್ನೆ ಜನವರಿ 2ರಂದು ಪಠಾಣ್ ಕೋಟ್ ಮೇಲೆ ನಡೆದ ದಾಳಿಯ ರೂವಾರಿ ಮೌಲಾನಾ ಅಜರ್, ಆತನ ಸಹೋದರ ರೌಫ್ ಮತ್ತು ಇತರ ಐವರು ಎಂದು ಭಾರತ ಪ್ರತಿಪಾದಿಸುತ್ತಾ ಬಂದಿತ್ತು. ಇದಕ್ಕೆ ಸಾಕ್ಷಿಯಾಗಿ ಪಾಕಿಸ್ತಾನ ಗಡಿ ದಾಟಿ ಬಂದ ಆರು ಮಂದಿ ಭಯೋತ್ಪಾದಕರು ದೂರವಾಣಿ ಕರೆ ಮಾಡಿದ್ದು, ಅವರು ಪಠಾಣ್ ಕೋಟ್ ವಾಯುನೆಲೆಯಲ್ಲಿ ಬಂದೂಕು ಹಾರಿಸಿದ ಸಾಕ್ಷಿಗಳಿದ್ದವು. ಭಯೋತ್ಪಾದಕರು ಮೌಲಾನಾ ಜೊತೆ ಸಂಪರ್ಕದಲ್ಲಿದ್ದರು ಎಂದು ಭಾರತ ಹೇಳಿತ್ತು.

ಮೊನ್ನೆ ಬುಧವಾರ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹೇಳಿಕೆ ನೀಡಿ, ಜೈಶೆಗೆ ಸೇರಿದ ಹಲವು ಮಂದಿ ಉಗ್ರರನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಅವರ ಕಚೇರಿಗಳಿಗೆ ಬೀಗಮುದ್ರೆ ಹಾಕಲಾಗಿದೆ ಎಂದು ಪ್ರಕಟಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT