ನೇಪಾಳಕ್ಕೆ ಆಂಬುಲೆನ್ಸ್ ಹಾಗೂ ಬಸ್ ಗಳ ಉಡುಗೊರೆ ನೀಡಿದ ಭಾರತ 
ವಿದೇಶ

ನೇಪಾಳಕ್ಕೆ ಆಂಬುಲೆನ್ಸ್ ಹಾಗೂ ಬಸ್ ಗಳ ಉಡುಗೊರೆ ನೀಡಿದ ಭಾರತ

67 ನೇ ಗಣರಾಜ್ಯೋತ್ಸವದ ಅಂಗವಾಗಿ ಭಾರತ ಸರ್ಕಾರ ನೇಪಾಳದ ವಿವಿಧ ಸಂಘ-ಸಂಸ್ಥೆಗಳಿಗೆ 40 ಆಂಬುಲೆನ್ಸ್ ಹಾಗೂ 8 ಬಸ್ ಗಳನ್ನು ಉಡುಗೊರೆಯಾಗಿ ನೀಡಿದೆ.

ಕಠ್ಮಂಡು: 67 ನೇ ಗಣರಾಜ್ಯೋತ್ಸವದ ಅಂಗವಾಗಿ ಭಾರತ ಸರ್ಕಾರ ನೇಪಾಳದ ವಿವಿಧ ಸಂಘ-ಸಂಸ್ಥೆಗಳಿಗೆ 40 ಆಂಬುಲೆನ್ಸ್ ಹಾಗೂ 8 ಬಸ್ ಗಳನ್ನು ಉಡುಗೊರೆಯಾಗಿ  ನೀಡಿದೆ.

ಭಾರತದ ರಾಯಭಾರಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನೇಪಾಳದಲ್ಲಿರುವ ಭಾರತದ ರಾಯಭಾರಿ ರಂಜಿತ್ ರೇ, ವಾಹನಗಳ ಕೀಲಿಗಳನ್ನು ಅಲ್ಲಿನ ವಿವಿಧ ಸಂಘಟನೆಗಳಿಗೆ ಹಸ್ತಾಂತರಿಸಿದ್ದಾರೆ. ಆಂಬುಲೆನ್ಸ್ ಹಾಗೂ ಬಸ್ ಗಳೊಂದಿಗೆ 52 ಗ್ರಂಥಾಲಯ, ಶಾಲೆ, ತರಬೇತಿ ಸಂಸ್ಥೆಗಳಿಗೆ ಅಗತ್ಯವಿರುವ ಪುಸ್ತಕಗಳನ್ನೂ ಸಹ ನೇಪಾಳಕ್ಕೆ ಉಡುಗೊರೆಯಾಗಿ ನೀಡಲಾಗಿದೆ.  
ಇದೇ ವೇಳೆ ನೇಪಾಳದ ನಿವೃತ್ತ ಯೋಧರು, ಅಂಗವಿಕಲ ಯೋಧರು ಹಾಗೂ ಅವರನ್ನು ಅವಲಂಬಿಸಿರುವವರಿಗೆ ನಗದು ರೂಪದಲ್ಲಿ ಪ್ರೋತ್ಸಾಹಧನವನ್ನೂ ನೀಡಲಾಗಿದೆ. ಭಾರತದ ರಾಯಭಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳೂ ಸೇರಿ 2 ,500 ಮಂದಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT