ಸಾಂದರ್ಭಿಕ ಚಿತ್ರ 
ವಿದೇಶ

ಮಯನ್ಮಾರ್ ನಲ್ಲಿ ಮುಸ್ಲಿಮರ ಪ್ರಾಥನಾ ಮಂದಿರಕ್ಕೆ ಬೆಂಕಿ ಇಟ್ಟ ಬೌದ್ಧ ಧರ್ಮೀಯ ಗುಂಪು

ಮಯನ್ಮಾರ್ ನಲ್ಲಿ ಮುಸ್ಲಿಂ ಪ್ರಾರ್ಥನಾ ಮಂದಿರಕ್ಕೆ ಬೌದ್ಧ ಧರ್ಮೀಯರ ಗುಂಪು ಬೆಂಕಿ ಹಚ್ಚಿದ ಘಟನೆ ಶುಕ್ರವಾರ ನಡೆದಿದೆ ಎಂದು ಶನಿವಾರ ಮಾಧ್ಯಮವೊಂದು ವರದಿ

ನಾಯ್ ಪಿಐ ತಾವ್: ಮಯನ್ಮಾರ್ ನಲ್ಲಿ ಮುಸ್ಲಿಂ ಪ್ರಾರ್ಥನಾ ಮಂದಿರಕ್ಕೆ ಬೌದ್ಧ ಧರ್ಮೀಯರ ಗುಂಪು ಬೆಂಕಿ ಹಚ್ಚಿದ ಘಟನೆ ಶುಕ್ರವಾರ ನಡೆದಿದೆ ಎಂದು ಶನಿವಾರ ಮಾಧ್ಯಮವೊಂದು ವರದಿ ಮಾಡಿದೆ. 
ರಾಜಧಾನಿ ನಾಯ್ ಪಿಐ ತಾವ್ ನಿಂದ 652 ಕಿಲೋ ಮೀಟರ್ ದೂರದಲ್ಲಿರುವ ಪಾಂಕತ್ ನಗರದಲ್ಲಿ ಈ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. 
ಮುಸ್ಲಿಂ ಧರ್ಮ ಮಂದಿರವನ್ನು ಕಾನೂನುಬಾಹಿರವಾಗಿ ಕಟ್ಟಲಾಗಿದೆ ಎಂದು ದೂಷಿಸಿ ಅದನ್ನು ನೆಲಸಮ ಮಾಡುವಂತೆ ಬೌದ್ಧ ರಾಷ್ಟ್ರೀಯರು ಆಗ್ರಹಿಸಿದ್ದಾರೆ. 
ಅಗ್ನಿಶ್ಯಾಮಕ ದಳ ಬೆಂಕಿ ನಂದಿಸಲು ಪ್ರಯತ್ನಿಸಿದ್ದರು, ಜನರ ಗುಂಪು ಅವರಿಗೆ ಅಡ್ಡಿಪಡಿಸಿದೆ ಎಂದು ತಿಳಿದುಬಂದಿದೆ. 
2012 ರಿಂದಲೂ ಕೋಮುಘರ್ಷಣೆ ಮಯನ್ಮಾರ್ ನಲ್ಲಿ ಜಾರಿಯಿದ್ದು, ಮುಸ್ಲಿಮರು ಮತ್ತು ಬೌದ್ಧ ಧರ್ಮೀಯರ ನಡುವೆ ಘರ್ಷಣೆಗಳು ಹೆಚ್ಚಳಗೊಂಡಿವೆ. ಅಂದಿನಿಂದ ಸುಮಾರು 12 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT