ಉಗ್ರರ ವಿರುದ್ಧ ಕಾರ್ಯಾಚರೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿ(ಸಂಗ್ರಹ ಚಿತ್ರ) 
ವಿದೇಶ

ಢಾಕಾ ಉಗ್ರರು ಸುಸಂಸ್ಕೃತ ವಿದ್ಯಾವಂತರು: ಬಾಂಗ್ಲಾ ಸಚಿವ

ಬಾಂಗ್ಲಾದೇಶದ ಢಾಕಾದ ಕೇಫೆಯೊಂದರ ಮೇಲೆ ದಾಳಿ ನಡೆಸಿದ ಉಗ್ರರೆಲ್ಲರೂ ಅತ್ಯಂತ ಸುಸಂಸ್ಕೃತ ಕುಟುಂಬದಿಂದ ಬಂದವರಾಗಿದ್ದು, ಪ್ರತಿಷ್ಠಿತ ಶಾಲೆಗಳಲ್ಲಿ ಉನ್ನತ...

ಢಾಕಾ: ಬಾಂಗ್ಲಾದೇಶದ ಢಾಕಾದ ಕೇಫೆಯೊಂದರ ಮೇಲೆ ದಾಳಿ ನಡೆಸಿದ ಉಗ್ರರೆಲ್ಲರೂ ಅತ್ಯಂತ ಸುಸಂಸ್ಕೃತ ಕುಟುಂಬದಿಂದ ಬಂದವರಾಗಿದ್ದು, ಪ್ರತಿಷ್ಠಿತ ಶಾಲೆಗಳಲ್ಲಿ ಉನ್ನತ ಪದವಿಗಳನ್ನು ಪಡೆದರಾಗಿದ್ದಾರೆ ಎಂದು ಭಾನುವಾರ ಬಾಂಗ್ಲಾ ಸಚಿವರೊಬ್ಬರು ತಿಳಿಸಿದ್ದಾರೆ.
ಬಾಂಗ್ಲಾ ಪ್ರಜೆ ಸೇರಿದಂತೆ 20 ವಿದೇಶಿಯರನ್ನು ಬಲಿ ಪಡೆದ ಉಗ್ರರೆಲ್ಲರೂ ೨೦ ರಿಂದ ೨೧ ವರ್ಷದ ಯುವಕರಾಗಿದ್ದು, ಅವರು ಡಾಕಾ ನಾರ್ಥ್‌ಸೌತ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾಗಿದ್ದಾರೆ. ಅದರಲ್ಲಿ ಯಾರೊಬ್ಬರು ಮದರಸಾಗಳಿಂದ ಬಂದಿಲ್ಲ ಎಂದು ಬಾಂಗ್ಲಾ ಗೃಹ ಸಚಿವ ಅಸಾದುಝಮಾನ್ ಖಾನ್ ಅವರು ಹೇಳಿರುವುದಾಗಿ ಅಲ್ಲಿನ ಮಾಧ್ಯಮ ವರದಿ ಮಾಡಿದೆ.
ಉಗ್ರರು ಪ್ರತಿಷ್ಠಿತ ಸ್ಕೂಲಾಸ್ಟಿಕ ಮತ್ತು ಟುರ್ಕಿಶ್ ಇಂಟರ್‌ನ್ಯಾಷನಲ್ ಸ್ಕೂಲ್‌ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ್ದರು ಉಗ್ರರಾಗಿದ್ದು, ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವರು ಫ್ಯಾಷನ್ ಗಾಗಿ ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಉಗ್ರರನ್ನು ಅಬು ಉಮರ್, ಅಬು ಸಲ್ಲಾಹ್, ಅಬು ರಹೀಮ್, ಅಬು ಮುಹೈರಿಬ್ ಅಲ್ ಬಂಗಾಲ್ ಎಂದು ಗುರುತಿಸಲಾಗಿದೆ. ಆರೋಪಿಗಳ ಹೆಸರು ಮತ್ತು ಭಾವಚಿತ್ರಗಳನ್ನು ಬಾಂಗ್ಲಾದೇಶ ಸರ್ಕಾರ ಇನ್ನಷ್ಟೇ ದೃಢೀಕರಿಸಬೇಕಿದೆ. ಇವರೆಲ್ಲರೂ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT