ಉಗ್ರರ ವಿರುದ್ಧ ಕಾರ್ಯಾಚರೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿ(ಸಂಗ್ರಹ ಚಿತ್ರ) 
ವಿದೇಶ

ಢಾಕಾ ಉಗ್ರರು ಸುಸಂಸ್ಕೃತ ವಿದ್ಯಾವಂತರು: ಬಾಂಗ್ಲಾ ಸಚಿವ

ಬಾಂಗ್ಲಾದೇಶದ ಢಾಕಾದ ಕೇಫೆಯೊಂದರ ಮೇಲೆ ದಾಳಿ ನಡೆಸಿದ ಉಗ್ರರೆಲ್ಲರೂ ಅತ್ಯಂತ ಸುಸಂಸ್ಕೃತ ಕುಟುಂಬದಿಂದ ಬಂದವರಾಗಿದ್ದು, ಪ್ರತಿಷ್ಠಿತ ಶಾಲೆಗಳಲ್ಲಿ ಉನ್ನತ...

ಢಾಕಾ: ಬಾಂಗ್ಲಾದೇಶದ ಢಾಕಾದ ಕೇಫೆಯೊಂದರ ಮೇಲೆ ದಾಳಿ ನಡೆಸಿದ ಉಗ್ರರೆಲ್ಲರೂ ಅತ್ಯಂತ ಸುಸಂಸ್ಕೃತ ಕುಟುಂಬದಿಂದ ಬಂದವರಾಗಿದ್ದು, ಪ್ರತಿಷ್ಠಿತ ಶಾಲೆಗಳಲ್ಲಿ ಉನ್ನತ ಪದವಿಗಳನ್ನು ಪಡೆದರಾಗಿದ್ದಾರೆ ಎಂದು ಭಾನುವಾರ ಬಾಂಗ್ಲಾ ಸಚಿವರೊಬ್ಬರು ತಿಳಿಸಿದ್ದಾರೆ.
ಬಾಂಗ್ಲಾ ಪ್ರಜೆ ಸೇರಿದಂತೆ 20 ವಿದೇಶಿಯರನ್ನು ಬಲಿ ಪಡೆದ ಉಗ್ರರೆಲ್ಲರೂ ೨೦ ರಿಂದ ೨೧ ವರ್ಷದ ಯುವಕರಾಗಿದ್ದು, ಅವರು ಡಾಕಾ ನಾರ್ಥ್‌ಸೌತ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾಗಿದ್ದಾರೆ. ಅದರಲ್ಲಿ ಯಾರೊಬ್ಬರು ಮದರಸಾಗಳಿಂದ ಬಂದಿಲ್ಲ ಎಂದು ಬಾಂಗ್ಲಾ ಗೃಹ ಸಚಿವ ಅಸಾದುಝಮಾನ್ ಖಾನ್ ಅವರು ಹೇಳಿರುವುದಾಗಿ ಅಲ್ಲಿನ ಮಾಧ್ಯಮ ವರದಿ ಮಾಡಿದೆ.
ಉಗ್ರರು ಪ್ರತಿಷ್ಠಿತ ಸ್ಕೂಲಾಸ್ಟಿಕ ಮತ್ತು ಟುರ್ಕಿಶ್ ಇಂಟರ್‌ನ್ಯಾಷನಲ್ ಸ್ಕೂಲ್‌ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ್ದರು ಉಗ್ರರಾಗಿದ್ದು, ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವರು ಫ್ಯಾಷನ್ ಗಾಗಿ ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಉಗ್ರರನ್ನು ಅಬು ಉಮರ್, ಅಬು ಸಲ್ಲಾಹ್, ಅಬು ರಹೀಮ್, ಅಬು ಮುಹೈರಿಬ್ ಅಲ್ ಬಂಗಾಲ್ ಎಂದು ಗುರುತಿಸಲಾಗಿದೆ. ಆರೋಪಿಗಳ ಹೆಸರು ಮತ್ತು ಭಾವಚಿತ್ರಗಳನ್ನು ಬಾಂಗ್ಲಾದೇಶ ಸರ್ಕಾರ ಇನ್ನಷ್ಟೇ ದೃಢೀಕರಿಸಬೇಕಿದೆ. ಇವರೆಲ್ಲರೂ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT