ಉಗ್ರರ ವಿರುದ್ಧ ಕಾರ್ಯಾಚರೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿ(ಸಂಗ್ರಹ ಚಿತ್ರ) 
ವಿದೇಶ

ಢಾಕಾ ಉಗ್ರ ದಾಳಿಯಲ್ಲಿ ಐಎಸ್ಐ ಪಾತ್ರ ತಳ್ಳಿಹಾಕಿದ ಪಾಕ್

22 ವಿದೇಶಿಯರನ್ನು ಬಲಿ ಪಡೆದ ಢಾಕಾ ಉಗ್ರ ದಾಳಿಯಲ್ಲಿ ಐಎಸ್ಐ ಪಾತ್ರವಿದೆ ಎಂಬ ಮಾಧ್ಯಮಗಳ ವರದಿಯನ್ನು ಪಾಕಿಸ್ತಾನ ಸ್ಪಷ್ಟವಾಗಿ ತಳ್ಳಿಹಾಕಿದ್ದು,...

ಇಸ್ಲಾಮಾಬಾದ್: 22 ವಿದೇಶಿಯರನ್ನು ಬಲಿ ಪಡೆದ ಢಾಕಾ ಉಗ್ರ ದಾಳಿಯಲ್ಲಿ ಐಎಸ್ಐ ಪಾತ್ರವಿದೆ ಎಂಬ ಮಾಧ್ಯಮಗಳ ವರದಿಯನ್ನು ಪಾಕಿಸ್ತಾನ ಸ್ಪಷ್ಟವಾಗಿ ತಳ್ಳಿಹಾಕಿದ್ದು, ಅದು ಆಧಾರ ರಹಿತ ಮತ್ತು ಬೇಜವಾಬ್ದಾರಿತನದ್ದು ಎಂದು  ಆಕ್ರೋಶ ವ್ಯಕ್ತಪಡಿಸಿದೆ.
ಢಾಕಾದ ಕೇಫೆಯೊಂದರಲ್ಲಿ ನಡೆದ ಉಗ್ರ ದಾಳಿಯಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯಾಲಯದ ವಕ್ತಾರ ನಫೀಜ್ ಝಕಾರಿಯಾ, ಇದೊಂದು ಪ್ರಚೋದನಾಕಾರಿ ವರದಿ ಎಂದಿದ್ದಾರೆ.
ಭಾರತೀಯ ಮಾಧ್ಯಮ ಪ್ರಕಟಿಸಿರುವ ವರದಿ ಅತ್ಯಂತ ವಿಷಾದಯನೀಯ, ಬೇಜವಾಬ್ದಾರಿತನದ್ದು ಮತ್ತು ಪ್ರಚೋದನಕಾರಿ ವರದಿಯಾಗಿದ್ದು, ಪಾಕಿಸ್ತಾನ ಇಂತಹ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕುತ್ತದೆ ಎಂದು ಹೇಳಿದ್ದಾರೆ.
ಢಾಕಾದ ರೆಸ್ಟೋರೆಂಟ್ ನಲ್ಲಿ ನಡೆದ ಉಗ್ರ ದಾಳಿ ಪ್ರಕರಣದಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಬೆಂಬಲ ನೀಡಿರುವ ಕುರಿತು ಬಾಂಗ್ಲಾದೇಶ ಪ್ರಧಾನಿ ಶೇಖ್  ಹಸೀನಾ ಅವರ ರಾಜಕೀಯ ಸಲಹೆಗಾರ ಹುಸೇನ್ ತೌಫೀಕ್  ಇಮಾಮ್ ಆರೋಪಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದವು.
ಢಾಕಾ ದಾಳಿ ಕುರಿತಂತೆ ಮಾಧ್ಯಮವೊಂದರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದ ತೌಫಿಕ್ ಇಮಾಮ್, "ಹಿಂದಿನಿಂದಲೂ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಉಗ್ರ ಚಟುವಟಿಕೆಗಳ ಹಿಂದೆ ಪಾಕಿಸ್ತಾನ ನಿರಂತರ ಪ್ರೋತ್ಸಾಹ ಹಾಗೂ ನೆರವು ನೀಡುತ್ತಿದೆ" ಎಂದು  ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT