ಸೇನೆಯನ್ನು ತಡೆಯುತ್ತಿರುವ ಜನ 
ವಿದೇಶ

ಟರ್ಕಿಯಲ್ಲಿ ಸೇನಾ ದಂಗೆಗೆ 104 ಸೈನಿಕರು ಸೇರಿ 265 ಮಂದಿ ಬಲಿ

ಟರ್ಕಿಯಲ್ಲಿ ಸೇನಾ ಪಡೆಗಳು ಕ್ಷಿಪ್ರಕ್ರಾಂತಿ ನಡೆಸಿದ ಪರಿಣಾಮ ಉಂಟಾದ ಘರ್ಷಣೆಯಲ್ಲಿ ಇದುವರೆಗೆ 104 ಬಂಡಾಯ ಸೈನಿಕರು ಸೇರಿದಂತೆ...

ಅಂಕಾರಾ: ಟರ್ಕಿಯಲ್ಲಿ  ಸೇನಾ ಪಡೆಗಳು ಕ್ಷಿಪ್ರಕ್ರಾಂತಿ ನಡೆಸಿದ ಪರಿಣಾಮ ಉಂಟಾದ ಘರ್ಷಣೆಯಲ್ಲಿ ಇದುವರೆಗೆ 104 ಬಂಡಾಯ ಸೈನಿಕರು ಸೇರಿದಂತೆ ಸುಮಾರು 265 ಮಂದಿ ಮೃತಪಟ್ಟಿದ್ದಾರೆ.
ಸಂಸತ್‌ ಮೇಲೆ ಬಾಂಬ್ ದಾಳಿಯೂ ನಡೆದಿದ್ದು, ಇದೂವರೆಗೂ 265 ಮಂದಿ ಗುಂಡಿನದಾಳಿಗೆ ಬಲಿಯಾಗಿದ್ದಾರೆ. ಮೃತ ಪಟ್ಟವರಲ್ಲಿ ಹೆಚ್ಚಿನ ಸೈನಿಕರೇ ಆಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಸೈನಿಕರು ಅಂಕರದಲ್ಲಿರುವ ಸಂಸತ್ ಭವನದ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ, ಜತೆಗೆ ಸಂಸತ್ ಭವನದ ಬಳಿ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಸಂಸತ್ ಭವನದ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಹಲವು ಅಧಿಕಾರಿಗಳು ಗಾಯಗೊಂಡಿದ್ದಾರೆ. ಇಸ್ತಾಂಬುಲ್​ನ ಬಾಸ್ಪೋರಸ್ ಸೇತುವೆಯನ್ನು ಸೇನೆ ವಶಕ್ಕೆ ಪಡೆದಿದ್ದು, ಈ ಪ್ರದೇಶದಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಟರ್ಕಿ ಅಧ್ಯಕ್ಷರ ಅರಮನೆಯ ಬಳಿ ಸಹ ಸೇನಾ ಪಡೆಯ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿವೆ.
ದಂಗೆಯನ್ನು ನಿಯಂತ್ರಿಸುವಲ್ಲಿ ಟರ್ಕಿ ಸರ್ಕಾರ ಮತ್ತು ಟರ್ಕಿ ಜನತೆ ಯಶಸ್ವಿಯಾಗಿದ್ದು, ಸೇನೆಯ ಸಣ್ಣ ತುಕಡಿಯೊಂದು ದಂಗೆ ಎದ್ದಿದೆ. ದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಟರ್ಕಿಯ ಜನರು ಸರ್ಕಾರಕ್ಕೆ ಬೆಂಬಲ ಸೂಚಿಸಬೇಕು ಎಂದು ಟರ್ಕಿ ಅಧ್ಯಕ್ಷ ರಿಸೆಪ್ ಟಯ್ಯಿಪ್ ಎರ್ಡೋಗನ್ ಅವರು ಕರೆ ನೀಡಿದ್ದಾರೆ. ಅಲ್ಲದೆ ಜನರು ರಸ್ತೆಗಿಳಿದು ಪ್ರಜಾಪ್ರಭುತ್ವವನ್ನು ಉಳಿಸಲು ಪ್ರತಿಭಟನೆ ನಡೆಸಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಗಿಳಿದು ಪ್ರಮುಖ ಸ್ಥಳಗಳಲ್ಲಿ ಜಮೆಯಾಗಿ ಸೈನಿಕರನ್ನು ಹಿಮ್ಮೆಟ್ಟಿಸಬೇಕು ಎಂದು ರಿಸೆಪ್ ಹೇಳಿದ್ದಾರೆ.
ಇನ್ನು ಪ್ರಧಾನಿ ಬಿನಾಲಿ ಯಿಲ್ದಿಮೀರ್  ತುರ್ತು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಂಸತ್ತಿನ ಪಕ್ಕ ಬಾಂಬ್ ದಾಳಿ ನಡೆದಿದ್ದು, ಕೆಲ ಪೊಲೀಸರಿಗೆ ಗಾಯವಾಗಿದೆ. ಎಲ್ಲಾ ಸಂಸದರೂ ಸುಕ್ಷಿತವಾಗಿದ್ದಾರೆ ಎಂದು ಟರ್ಕಿ ಸಂಸತ್ ಸ್ಪೀಕರ್ ಇಸ್ಮಾಲಿ ಕಹ್ರಾಮನ್ ತಿಳಿಸಿದ್ದಾರೆ.
ಪೊಲೀಸರು ಸೇನೆಯ ಸುಮಾರು 136 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಸ್ತಾಂಬುಲ್ ವಿಮಾನ ನಿಲ್ದಾಣವನ್ನು ಸರ್ಕಾರಿ ಪಡೆಗಳು ಮರು ವಶ ಪಡಿಸಿಕೊಂಡಿದ್ದು, ವಿಮಾನ ಹಾರಾಟವನ್ನು ಪುನಾರಂಭಿಸಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT