ಹಫೀಜ್ ಸಯೀದ್ 
ವಿದೇಶ

ಭಾರತದೊಂದಿಗಿನ ವಾಣಿಜ್ಯ, ವಿದೇಶಾಂಗ ಸಂಬಂಧಗಳನ್ನು ಸ್ಥಗಿತಗೊಳಿಸಿ: ಉಗ್ರ ಹಫೀಜ್ ಸಯೀದ್

ಭಾರತದೊಂದಿಗಿನ ವಿದೇಶಾಂಗ, ವಾಣಿಜ್ಯ ಸಂಬಂಧಗಳನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಉಗ್ರ ಹಫೀಜ್ ಸಯೀದ್ ಪಾಕಿಸ್ತಾನ ಸರ್ಕಾರವನ್ನು ಆಗ್ರಹಿಸಿದ್ದಾನೆ.

ಲಾಹೋರ್: ಭಾರತದೊಂದಿಗಿನ ವಿದೇಶಾಂಗ, ವಾಣಿಜ್ಯ ಸಂಬಂಧಗಳನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಜಮಾತ್‌-ಉದ್‌-ದಾವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಪಾಕಿಸ್ತಾನ ಸರ್ಕಾರವನ್ನು ಆಗ್ರಹಿಸಿದ್ದಾನೆ.

ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಉಗ್ರ ಬುರ್ಹಾನ್ ಮುಜಾಫರ್ ವಾನಿ ಹತ್ಯೆಯ ನಂತರ ಉಗ್ರ ಹಫೀಜ್ ಸಯೀದ್, ಭಾರತದ ವಿರುದ್ಧ ಕಿಡಿಕಾರಿದ್ದು, ಭಾರತದೊಂದಿಗೆ ನಮಗೆ ವಾಣಿಜ್ಯ ಸಂಬಂಧ ಬೇಡ, ತಕ್ಷಣವೇ ಭಾರತದೊಂದಿಗಿನ ವಿದೇಶಾಂಗ ಸಂಬಂಧವನ್ನು ರದ್ದುಗೊಳಿಸಿ ಎಂದು ಪಾಕಿಸ್ತಾನ ಸರ್ಕಾರಕ್ಕೆ ಒತ್ತಾಯಿಸಿದ್ದಾನೆ. ಭಾರತದಲ್ಲಿರುವ ಪಾಕಿಸ್ತಾನದ ಎಲ್ಲಾ ರಾಯಭಾರಿಗಳನ್ನು ವಾಪಸ್ ಕರೆಸಿಕೊಳ್ಳಬೇಕು, ಹಾಗೆಯೇ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರಿಯನ್ನು ವಾಪಸ್ ಭಾರತಕ್ಕೆ ಕಳಿಸಬೇಕು ಎಂದಿರುವ ಹಫೀಜ್ ಸಯೀದ್, ಪಾಕಿಸ್ತಾನ ಕಾಶ್ಮೀರ ಪ್ರತ್ಯೇಕತಾವಾದಿಗಳ ಪರವಾಗಿದೆ ಎಂದು ಹೇಳಿದ್ದಾನೆ. ಈಗಾಗಲೇ ಉಗ್ರ ಹಫೀಜ್ ತಲೆಗೆ ಅಮೆರಿಕ 10 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!