ಪಾಕ್ ಹೈ ಕಮಿಷನರ್ ಅಬ್ದುಲ್ ಬಸಿತ್ (ಸಂಗ್ರಹ ಚಿತ್ರ) 
ವಿದೇಶ

5 ನಿಮಿಷದಲ್ಲಿ ದೆಹಲಿ ಮೇಲೆ ದಾಳಿ; ವಿಜ್ಞಾನಿ ಖಾನ್ ಹೇಳಿಕೆ ತಳ್ಳಿ ಹಾಕಿದ ಪಾಕ್

ಕೇವಲ ಐದೇ ನಿಮಿಷದಲ್ಲಿ ಭಾರತ ರಾಜಧಾನಿ ದೆಹಲಿ ಮೇಲೆ ದಾಳಿ ನಡೆಸುವ ಸಾಮರ್ಥ್ಯ ಪಾಕಿಸ್ತಾನಕ್ಕೆ ಇದೆ ಎಂಬ ಪಾಕಿಸ್ತಾನದ ಭೌತಶಾಸ್ತ್ರ ವಿಜ್ಞಾನಿ ಅಬ್ದುಲ್ ಖಾದರ್ ಖಾನ್ ಅವರ ಹೇಳಿಕೆಯನ್ನು ಪಾಕಿಸ್ತಾನ ಸರ್ಕಾರ ತಳ್ಳಿಹಾಕಿದೆ.

ನಾಗ್ಪುರ: ಕೇವಲ ಐದೇ ನಿಮಿಷದಲ್ಲಿ ಭಾರತ ರಾಜಧಾನಿ ದೆಹಲಿ ಮೇಲೆ ದಾಳಿ ನಡೆಸುವ ಸಾಮರ್ಥ್ಯ ಪಾಕಿಸ್ತಾನಕ್ಕೆ ಇದೆ ಎಂಬ ಪಾಕಿಸ್ತಾನದ ಭೌತಶಾಸ್ತ್ರ ವಿಜ್ಞಾನಿ ಅಬ್ದುಲ್ ಖಾದರ್ ಖಾನ್  ಅವರ ಹೇಳಿಕೆಯನ್ನು ಪಾಕಿಸ್ತಾನ ಸರ್ಕಾರ ತಳ್ಳಿಹಾಕಿದೆ.

ಪಾಕಿಸ್ತಾನದ ಭೌತಶಾಸ್ತ್ರ ವಿಜ್ಞಾನಿ ಅಬ್ದುಲ್ ಖಾದರ್ ಖಾನ್ ಹೇಳಿಕೆಗೆ ವಿಶ್ವಮಟ್ಟದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಸರ್ಕಾರ ವಿಜ್ಞಾನಿ  ಹೇಳಿಕೆಯನ್ನು ತಳ್ಳಿ ಹಾಕಿದೆ. ನಾಗ್ಫುರದಲ್ಲಿ ನಡೆದ ಸ೦ವಾದವೊ೦ದರಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಪಾಕಿಸ್ತಾನದ ಹೈ ಕಮಿಷನರ್ ಅಬ್ದುಲ್ ಬಸಿತ್ ಅವರು, ವಿಜ್ಞಾನಿ ಅಬ್ದುಲ್ ಖಾದರ್  ಖಾನ್ ಹೇಳಿಕೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಅಬ್ದುಲ್ ಖಾದರ್ ಖಾನ್ ವೈಯಕ್ತಿಕವಾಗಿ ಆ ಹೇಳಿಕೆ ನೀಡಿದ್ದು, ಅದು ಸಕಾ೯ರದ ಹೇಳಿಕೆಯಲ್ಲ. ಪಾಕಿಸ್ತಾನದ ಅಣ್ವಸ್ತ್ರಗಳು ಉಗ್ರರ ಕೈ ಸೇರುತ್ತವೆ ಎ೦ಬ ಆತ೦ಕ ಕೂಡ ಅನಗತ್ಯ.  ಪಾಕಿಸ್ತಾನದ ಅಣ್ವಸ್ತ್ರಗಳನ್ನು ಬಹು ಆಯಾಮದ ಭದ್ರತೆಯಲ್ಲಿ ಸುರಕ್ಷಿತವಾಗಿ ಇಡಲಾಗಿದೆ. ಭಾರತದೊ೦ದಿಗೆ ಶಾ೦ತಿ ಸ೦ಬ೦ಧ ಕಾಯ್ದುಕೊಳ್ಳಲು ಬಯಸುತ್ತೇವೆ ಎ೦ದು ಬಸಿತ್ ಹೇಳಿದ್ದಾರೆ.

ದಾವೂದ್ ಪಾಕಿಸ್ತಾನದಲ್ಲಿಲ್ಲ
ಇದೇ ವೇಳೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕುರಿತು ತಮ್ಮ ಮತ್ತದೇ ಹಳೇ ರಾಗವನ್ನು ಮುಂದುವರೆಸಿರುವ ಬಸಿತ್, ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿಲ್ಲ ಎಂದು  ಪುನರುಚ್ಛರಿಸಿದ್ದಾರೆ. ಪಾತಕಿ ದಾವೂದ್ ಇಬ್ರಾಹಿ೦ ಪಾಕಿಸ್ತಾನದಲ್ಲಿರುವ ಬಗ್ಗೆ ಮಾಹಿತಿ ಇಲ್ಲ. ಹಾಗಾಗಿ ಆತನನ್ನು ಭಾರತಕ್ಕೆ ಹಸ್ತಾ೦ತರಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎ೦ದು ಬಸಿತ್  ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT