ಸರ್ತಾಜ್ ಅಜೀಜ್ 
ವಿದೇಶ

ಭಾರತದ ಜೊತೆ ಮಾತುಕತೆಗೆ ಆತುರವೇನಿಲ್ಲ: ಪಾಕ್

ಭಾರತದೊಂದಿಗೆ ಶಾಂತಿಯುತ ಮಾತುಕತೆಯನ್ನು ಪ್ರಾರಂಭಿಸಲು ಆತುರವಿಲ್ಲ ಎಂದು ಪಾಕಿಸ್ತಾನದ ಹಿರಿಯ ಅಧಿಕಾರಿ ಸರ್ತಾಜ್ ಅಜೀಜ್ ಹೇಳಿದ್ದಾರೆ.

ಇಸ್ಲಾಮಾಬಾದ್: ಭಾರತದೊಂದಿಗೆ ಶಾಂತಿಯುತ ಮಾತುಕತೆಯನ್ನು ಪ್ರಾರಂಭಿಸಲು ಆತುರವಿಲ್ಲ ಎಂದು ಪಾಕಿಸ್ತಾನದ ಹಿರಿಯ ಅಧಿಕಾರಿ ಸರ್ತಾಜ್ ಅಜೀಜ್ ಹೇಳಿದ್ದಾರೆ.

ದ್ವಿಪಕ್ಷೀಯ ಮಾತುಕತೆಗೆ ಪಾಕ್ ಆತುರವೇನು ಇಲ್ಲ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ದಕ್ಷಿಣ ಏಷ್ಯಾದಲ್ಲಿ ಶಾಂತಿಯುತ ವಾತಾವರಣ ನೆಲೆಸಬೇಕಾದರೆ ಪಾಕಿಸ್ತಾನ- ಭಾರತದ ನಡುವೆ ದ್ವಿಪಕ್ಷೀಯ ಮಾತುಕತೆ ಪ್ರಾರಂಭವಾಗಬೇಕು ಎಂದು ಸರ್ತಾಜ್ ಅಜೀಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಬಾರಿಯೂ ಭಾರತದ ವಿರುದ್ಧ ಆರೋಪ ಮಾಡಿರುವ ಸರ್ತಾಜ್ ಅಜೀಜ್, ಪಾಕಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸಲು ಹಾಗೂ ದ್ವಿಪಕ್ಷೀಯ ಮಾತುಕತೆಗೆ ಭಾರತ ಎಂದಿಗೂ ಅವಕಾಶ ನೀಡಿಲ್ಲ ಎಂದು ಹೇಳಿರುವುದನ್ನು ಡಾನ್ ಪತ್ರಿಕೆ ವರದಿ ಮಾಡಿದೆ.

ಪಠಾಣ್ ಕೋಟ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ನಂತರ ಭಾರತ-ಪಾಕಿಸ್ತಾನದ ನಡುವಿನ ಮಾತುಕತೆ ಸ್ಥಗಿತಗೊಂಡಿದೆ. ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆಯನ್ನು ಪುನಾರಂಭ ಮಾಡಲು 2015 ರ ಡಿಸೆಂಬರ್ 9 ರಂದು ನಿರ್ಧರಿಸಲಾಗಿತ್ತು. ಆದರೆ  ಪಠಾಣ್ ಕೋಟ್ ದಾಳಿಯಿಂದ ಎಲ್ಲವೂ ಹಾಳಾಯಿತು ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ.

ಭಯೋತ್ಪಾದನೆ ನಿರ್ಮೂಲನೆ ವಿಷಯದಲ್ಲಿ ಪಾಕಿಸ್ತಾನ ಪ್ರಗತಿ ಸಾಧಿಸಿದರೆ ಮಾತುಕತೆ ನಡೆಸಲು ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದು ಭಾರತ ಹೇಳುತ್ತದೆ. ಆದರೆ ನಾವು ಕಾಶ್ಮೀರ ವಿಷಯವನ್ನೂ ಮಾತುಕತೆಯಲ್ಲಿ ಚರ್ಚಿಸಬೇಕು ಎಂಬುದು ಪಾಕಿಸ್ತಾನದ ಬೇಡಿಕೆ ಎಂದು ಸರ್ತಾಜ್ ಅಜೀಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT