ಬರಾಕ್ ಒಬಾಮ-ನರೇಂದ್ರ ಮೋದಿ 
ವಿದೇಶ

ವಿಶೇಷ ಸ್ನೇಹಿತ ಪ್ರಧಾನಿ ಮೋದಿ ಸ್ವಾಗತಿಸಲು ಸಿದ್ಧರಾದ ಬರಾಕ್ ಒಬಾಮ

ಪ್ರಧಾನಿಯಾದ ಬಳಿಕ ನಾಲ್ಕನೇ ಬಾರಿಗೆ ಅಮೆರಿಕಗೆ ಭೇಟಿ ನೀಡುತ್ತಿರುವ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಶ್ವೇತ ಭವನ ಸಜ್ಜುಗೊಂಡಿದೆ.

ವಾಷಿಂಗ್ ಟನ್: ಪ್ರಧಾನಿಯಾದ ಬಳಿಕ ನಾಲ್ಕನೇ ಬಾರಿಗೆ ಅಮೆರಿಕಗೆ ಭೇಟಿ ನೀಡುತ್ತಿರುವ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಶ್ವೇತ ಭವನ ಸಜ್ಜುಗೊಂಡಿದೆ.

ನರೇಂದ್ರ ಮೋದಿ ಭಾರತದ ಪ್ರಧಾನಿಯಾದ ನಂತರ ಮೂರು ಬಾರಿ ಅಮೆರಿಕ ಪ್ರವಾಸ ಕೈಗೊಂಡಿದ್ದರೆ, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭಾರತಕ್ಕೆ ಎರಡು ಬಾರಿ ಭೇಟಿ ನೀಡಿದ್ದಾರೆ. ಉಭಯ ದೇಶಗಳ ನಡುವಿನ  ಉಭಯ ನಾಯಕರು ತಮ್ಮ ಅವಧಿಯಲ್ಲಿ ದ್ವಿಪಕ್ಷೀಯ ಸಂಬಂಧ ಹೊಸ ಎತ್ತರವನ್ನು ತಲುಪಿರುವುದಾಗಿ ಹೇಳಿದ್ದಾರೆ.

ಬರಾಕ್ ಒಬಾಮ ಅವರ ಅಮೆರಿಕ ಅಧ್ಯಕ್ಷ ಹುದ್ದೆಯ ಅವಧಿ ಜನವರಿಗೆ ಮುಕ್ತಾಯಗೊಳ್ಳಲಿದ್ದು, ಪ್ರಸ್ತುತ ನಡೆಯಲಿರುವ ದ್ವಿಪಕ್ಷೀಯ ಸಂಬಂಧ ಒಬಾಮ ಆಡಳಿತದ ಏಷ್ಯಾಗೆ ಹೆಚ್ಚಿನ ಆದ್ಯತೆ ಎಂಬ ಮಂತ್ರದ ಯಶಸ್ಸಿನ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಅಮೆರಿಕದ ಈ ಭೇಟಿ ಮುಖ್ಯವಾಗಿದ್ದು ಅಮೆರಿಕ- ಭಾರತ ನಡುವಿನ ವ್ಯಾಪಾರ-ವಹಿವಾಟನ್ನು 120 ಮಿಲಿಯನ್ ಡಾಲರ್ ನಿಂದ 500 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ದೃಷ್ಟಿಯಿಂದ ಮಹತ್ವ ಪಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ಬಗ್ಗೆ ಮಾತನಾಡಿರುವ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್, " ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾರ್ಯನಿರತ ವಲಯದಲ್ಲಿ ತಮ್ಮೊಂದಿಗೆ ನಿಕಟ ಸಂಬಂಧ ಹೊಂದಿರುವ ನಾಯಕನೆಂದು ಒಬಾಮ ಬಣ್ಣಿಸಿದ್ದು ಅಮೆರಿಕಾಗೆ ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ಅಮೆರಿಕದ ಭೇಟಿ ಹಲವು ಕಾರಣಗಳಿಂದ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಗೊಳಿಸುವ ಭೇಟಿ ಎಂದು ಹೇಳಬಹುದಾಗಿದೆ ಎಂದು ಜೈಶಂಕರ್ ಹೇಳಿದ್ದಾರೆ. ಜೂ.7 ರಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷರನ್ನು ಭೇಟಿ ಮಾಡಲಿದ್ದಾರೆ. ಇದಾದ ಬಳಿಕ ಅಮೆರಿಕ ಉದ್ಯಮಿಗಳೊಂದಿಗೆ ಮಾತುಕತೆ, ನಂತರ ಅಮೆರಿಕ ಕಾಂಗ್ರೆಸ್ (ಸಂಸತ್) ನ್ನುದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ.

ಒಬಾಮ- ಮೋದಿ ಮಾತುಕತೆ ವೇಳೆ ಪ್ರಮುಖ ಘೋಷಣೆಗಳ ಸಾಧ್ಯತೆಯನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ. ಆದರೆ ಪರಮಾಣು ಸ್ಥಾವರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಮೆರಿಕದ  ವಿದ್ಯುತ್ ಸಂಸ್ಥೆ ವೆಸ್ಟಿಂಗ್ಹೌಸ್ ನೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT