ಪ್ರಣಬ್ ಮುಖರ್ಜಿ 
ವಿದೇಶ

ಒಗ್ಗಟ್ಟಿನ ಪ್ರಯತ್ನದಿಂದ ಮಾತ್ರ ಭಯೋತ್ಪಾದನೆ ನಿರ್ಮೂಲನೆ ಸಾಧ್ಯ: ಪ್ರಣಬ್ ಮುಖರ್ಜಿ

ಭಯೋತ್ಪಾದನೆಯನ್ನು ಗಡಿ ಇಲ್ಲದ ಜಾಗತಿಕ ಪಿಡುಗು ಎಂದು ಆಫ್ರಿಕಾದ ಪ್ರವಾಸದಲ್ಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ನಾಗರಿಕ ಪ್ರಪಂಚದ ಒಗ್ಗಟ್ಟಿನ ಪ್ರಯತ್ನದಿಂದ ಮಾತ್ರ ಭಯೋತ್ಪಾದನೆ ನಿರ್ಮೂಲನೆ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಕ್ರಾ: ಭಯೋತ್ಪಾದನೆಯನ್ನು ಗಡಿ ಇಲ್ಲದ ಜಾಗತಿಕ ಪಿಡುಗು ಎಂದು ಆಫ್ರಿಕಾದ ಪ್ರವಾಸದಲ್ಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ನಾಗರಿಕ ಪ್ರಪಂಚದ ಒಗ್ಗಟ್ಟಿನ ಪ್ರಯತ್ನದಿಂದ ಮಾತ್ರ ಭಯೋತ್ಪಾದನೆ ನಿರ್ಮೂಲನೆ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಘಾನಾದಲ್ಲಿ ಅಲ್ಲಿನ ಅಧ್ಯಕ್ಷ ಜಾನ್ ದ್ರಮನಿ ಮಹಾಮ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಭಾರತವೂ ಸಹ ಹಲವು ದಶಕಗಳಿಂದ ಭಯೋತ್ಪಾದನೆಯ ಸಂತ್ರಸ್ತ ರಾಷ್ಟ್ರವಾಗಿದ್ದು, ಘಾನಾ ಆತಂಕವನ್ನು ಹಂಚಿಕೊಂಡಿದೆ ಎಂದು ಹೇಳಿದ್ದಾರೆ.

" ಭಯೋತ್ಪಾದನೆ ಎಂಬುದು ಗಡಿಯನ್ನು ಹೊಂದಿರದ ಜಾಗತಿಕ ಪಿಡಿಗು, ನಾಶ ಮಾಡುವುದನ್ನು ಹೊರತುಪಡಿಸಿ ಅದಕ್ಕೆ ಯಾವುದೇ ರೀತಿಯ ಗುರಿ ಇಲ್ಲ, ಜಾಗತಿಕ ಸಮುದಾಯ ಒಗ್ಗಟ್ಟಿನಿಂದ ನಿಂತರೆ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಬಹುದು" ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಘಾನಾದ ಅಧ್ಯಕ್ಷ ಮಹಾಮ ಮಹಾತ್ಮ ಗಾಂಧಿ ಅವರನ್ನು ಸ್ಮರಿಸಿ ಭಾರತದ ಮೊದಲ ಪ್ರಧಾನಿ ಮತ್ತು ಘಾನಾದ ಮೊದಲ ಅಧ್ಯಕ್ಷ ಕ್ವಾಮೆ ನುಕ್ರಮೆ ಅವರ ನಡುವಿನ ಒಡನಾಟವನ್ನು ನೆನೆದರೆ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ರವೀಂದ್ರ ಠಾಗೂರ್ ಅವರ ಆಫ್ರಿಕಾ ಎಂಬ ಶೀರ್ಷಿಕೆಯುಳ್ಳ ಪದ್ಯವನ್ನು ಉಲ್ಲೇಖಿಸಿದರು.  ಘಾನಾದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿದರೆ ಭಾರತದ ಕಂಪನಿಗಳು ಹೂಡಿಕೆ ಮಾಡಲು ಸಿದ್ಧವಿರುವುದಾಗಿ ಪ್ರಣಬ್ ಮುಖರ್ಜಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT